News Karnataka Kannada
Sunday, April 28 2024
ಕರ್ನಾಟಕ

ಇ ವಿಧಾನ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲ

Vidhana Soudha
Photo Credit :

ಬೆಂಗಳೂರು, ; ರಾಜ್ಯ ವಿಧಾನ ಮಂಡಲವನ್ನು ಕಾಗದ ರಹಿತಗೊಳಿಸುವ ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ಬಹುತೇಕ ವಿಫಲವಾಗಿದೆ. ಇತ್ತೀಚೆಗೆ ಇ-ವಿಧಾನ ಕಾರ್ಯರೂಪಕ್ಕೆ ಬರದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ಬೇಸರ ವ್ಯಕ್ತಪಡಿಸಿದ್ದರು. 2014ರಲ್ಲಿ ರಾಜ್ಯದ ವಿಧಾನಮಂಡಲವನ್ನು ಕಾಗದ ರಹಿತವಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯ ಆರಂಭವಾಗಿತ್ತು.
ಆ ವೇಳೆ ಹಿಮಾಚಲ ಪ್ರದೇಶ ವಿಧಾನಸಭೆ ಯನ್ನು ಡಿಜಿಟಲೀಕರಣ ಮಾಡಲಾಗಿತ್ತು. ಇದೇ ಮಾದರಿ ಯಲ್ಲಿ ರಾಜ್ಯ ವಿಧಾನಸಭೆ, ವಿಧಾನರಿಷತ್‍ನಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾಪ ಬಂದಿತ್ತು. ಈ ಸಂಬಂಧ ವಿಧಾನಸಭೆ ಸಚಿವಾಲಯದ ಉನ್ನತಾಧಿಕಾರಿಗಳು ಹಾಗೂ ಐಟಿ ತಜ್ಞರು 2015ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ ಅಧ್ಯಯನ ಕೈಗೊಂಡು ಬಂದಿದ್ದರು.ಬೆಳಗಾವಿ ಸುವರ್ಣಸೌಧ ಕಟ್ಟಡ ಸೇರಿ ಉಭಯ ಸದನಗಳನ್ನ ಇ-ವಿಧಾನ ಮಂಡಲವಾಗಿಸಲು ಸುಮಾರು 69 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ಒನ್ ನೇಷನ್ ಒನ್ ಅಪ್ಲಿಕೇಷನ್ ಹೆಸರಿನಡಿ ನ್ಯಾಷನಲ್ ಇ-ವಿಧಾನ್ ಅಪ್ಲಿಕೇಷನ್ ಸಿದ್ಧಪಡಿಸಿದೆ. ಇದರ ವೆಬ್‍ಸೈಟ್‍ಗೆ ಕರ್ನಾಟಕವೂ ಸೇರ್ಪಡೆಗೊಂಡಿದೆ.
ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್ (ನೆವ) ಇದರ ಅನುಷ್ಠಾನದ ಜವಾಬ್ದಾರಿ ಹೊಂದಿತ್ತು.ಕೇಂದ್ರ ಸರ್ಕಾರವೇ ಶೇ.60ರಷ್ಟು ವೆಚ್ಚ ಭರಿಸುವ ಹೊಣೆ ಹೊತ್ತಿತ್ತು. ಈ ಸಂಬಂಧ 2018ರಲ್ಲಿ ರಾಜ್ಯದ ಸಿಬ್ಬಂದಿಗೆ ತರಬೇತಿಯನ್ನು ನೀಡಲಾಗಿತ್ತು. ಆದರೆ ಇಷ್ಟು ವರ್ಷ ಕಳೆದರೂ ಶೀಘ್ರ ಯೋಜನೆ ಜಾರಿಗೆ ಬರುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು