ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಮಹಿಳೆಯರು, ರೈತರು, ಯುವಕರು, ಅಲ್ಪ ಸಂಖ್ಯಾತರು ಹಾಗೂ ವಿಶೇಷವಾಗಿ ದಲಿತ ಪರ ಬಜೆಟ್ ಎಂದು ಪ್ರಚಾರ ಸಮಿತಿ ಅದ್ಯಕ್ಷ ಹಿರೇಮಗಳೂರು ರಾಮಚಂದ್ರ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ನಿರುದ್ಯೋಗ ಯುವಕ ಯುವತಿಯವರಿಗೆ ಈಗಾಗಲೇ ಪ್ರವಾಸೋಧ್ಯಮ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಇಲಾಖೆಯಿಂದ ಲಘು ವಾಹನ(ಪ್ರವಾಸಿ ಟ್ಯಾಕ್ಸಿ) ನೀಡುತ್ತಿದ್ದು, ಈ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಯುವಕರಿಗೆ ಭಾರಿ ವಾಹನ ತರಬೇತಿ ನೀಡಿ ಶೇ 0 %ನಲ್ಲಿ 15 ಲಕ್ಷ ಸಾಲ ನೀಡಲು ನಿರ್ಧರಿಸುವುದು ಹಾಗೂ ಪರಿಶಿಷ್ಟ ಜಾತಿಯ ಗುತ್ತಿಗೆದಾರರಿಗೆ 50 ಲಕ್ಷದಿಂದ 1 ಕೋಟಿ ರೂ. ಮೀಸಲು ಮಾಡಿರುವುದು ಸ್ವಾಗತಾರ್ಹ.
ಈಗಾಗಲೇ ಹಲವಾರು ಭಾಗ್ಯ ಯೋಜನೆಗಳನ್ನು ನೀಡಿರುವ ಮುಖ್ಯ ಮಂತ್ರಿಗಳು ಮಹಿಳೆಯರಿಗೆ ಅನುಕೂಲವಾಗುವಂತೆ ಅನಿಲಭಾಗ್ಯ ಯೋಜನೆ ಜಾರಿಗೆ ತಂದಿದ್ದು, ರಾಜ್ಯದಲ್ಲಿ 30 ಲಕ್ಷ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲಿದ್ದಾರೆ. ಮೊದಲನೇ ಹಂತದಲ್ಲಿ 10 ಲಕ್ಷ ಮಹಿಳೆಯುರಿಗೆ ಉಪಯೋಗವಾಗಲಿದೆ. ಇದಕ್ಕೆ ಸರ್ಕಾರ ಗ್ಯಾಸ್ ಸ್ಟವ್, ಹಾಗೂ ಭರ್ತಿಯಾದ 2 ಸಿಲಿಂಡರ್ಗಳು ಸೇರಿ 4254 ರೂ. ರಾಜ್ಯ ಸರ್ಕಾರ ವೆಚ್ಚ ಮಾಡುತ್ತಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಹಿರೇಮಗಳೂರು ರಾಮಚಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…