ವಿಜಯಪುರ: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮೂಲಕ ವಂಚಿಸುತ್ತಿದ್ದ ಮಹಿಳೆ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದ ಉದ್ಯಮಿ ಸುನೀಲ್ ಪಾಟೀಲ್ ಅವರಿಗೆ ಮಹಿಳೆ ಹಾಗೂ ತಂಡವು ಹನಿಟ್ರ್ಯಾಪ್ ಮೂಲಕ ವಂಚಿಸಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಾದ ಕಾರಣ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯು ಬೆಳಗಾವಿ ಜಿಲ್ಲೆಯವರು. ಮಹಿಳೆಯ ಜತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಠ್ಠಲ ವಡ್ಡರ, ಮುರುಗೇಶ ಉಳ್ಳಾಗಡ್ಡಿ ಎಂಬಾತನನ್ನು ಬಂಧಿಸಲಾಗಿದೆ. ಲಿಂಗರಾಜು ಎಂಬಾತ ಪರಾರಿಯಾಗಿದ್ದಾನೆ.
ಈ ಬಗ್ಗೆ ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.