ಬಳ್ಳಾರಿ ; ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಕುಟುಂಬ ಸಮೇತರಾಗಿ ತುಂಗಭದ್ರಾ ಆಣೆಕಟ್ಟಿಗೆ ಭೇಟಿ ಕೊಟ್ಟು ವಿಹಂಗಮ ನೋಟವನ್ನು ಕಣ್ತುಂಬಿಸಿಕೊಂಡರು. ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಆಗಮನದಿಂದ ಸ್ಥಳಿಯರ ಮತ್ತು ತುಂಗಭದ್ರಾ ಜಲಾಶಯದ ಅಧಿಕಾರಿಗಳ ಮನಸ್ಸು ಸಂತಸಗೊಂಡಿತ್ತು.
ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ. ತುಂಗಭದ್ರಾ ಜಲಾಶಯವು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ರೈತರ ಜೀವನಾಡಿಯಾಗಿದೆ. ಈ ಭಾಗಗಳ ರೈತರು ಕೃಷಿಗೆ ಪೂರಕವಾಗಿದೆ ಎಂದು ಇದೇ ಸಂದರ್ಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು. ಜಲಾಶಯ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ರೈತನ ಮಗನಾಗಿ ಜಲಾಶಯ ವೀಕ್ಷಿಸಿದ್ದು ಸಂತಸ ತಂದಿದೆ. ಈ ಜಲಾಶಯ ರೈತರ ಕೃಷಿಗೆ ತುಂಬಾ ಅನುಕೂಲವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು. ಜಲಾಶಯ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ರೈತನ ಮಗನಾಗಿ ಜಲಾಶಯ ವೀಕ್ಷಿಸಿದ್ದು ಸಂತಸ ತಂದಿದೆ ಎಂದರು.