News Karnataka Kannada
Tuesday, April 30 2024
ಕರ್ನಾಟಕ

ಊಟ ಮಾಡಲಿ ಇಲ್ಲ ಉಪವಾಸ ಕೂರಲಿ ಮೇಕೆದಾಟು ಯೋಜನೆ ಮಾಡುತ್ತೇವೆ ; ಬೊಮ್ಮಾಯಿ

Mekedatu Project 15 7 21
Photo Credit :

ಬೆಂಗಳೂರು: ಮೇಕೆದಾಟು ವಿಚಾರವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೇಡರ್‌ ನ ಮಾಜಿ ಐಪಿಎಸ್ ಅಧಿಕಾರಿ, ಅಣ್ಣಾಮಲೈ ಅವರು ಆಗಸ್ಟ್‌ 5 ರಂದು ಉಪವಾಸ ಕೂರುವ ಘೋಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಮೇಕೆದಾಟುವಿನಲ್ಲಿ ನಮ್ಮ ಹಕ್ಕಿದೆ. ಆ ನೀರಿನಲ್ಲಿ ನಮಗೂ ಪಾಲಿದೆ, ಹಕ್ಕಿದೆ. ಆ ಯೋಜನೆ ಮಾಡಲು ಈಗಾಗಲೇ ನಾವು ಡಿಪಿಆರ್ ಮಾಡಿದ್ದೇವೆ. ಈ ಡಿಪಿಆರ್ ಅಪ್ರೂವ್ ಮಾಡಿಕೊಂಡು ನಾವು ಯೋಜನೆಯನ್ನು ಪೂರ್ಣ ಮಾಡಿಯೇ ಮಾಡುತ್ತೇವೆ. ಈ ಬಗ್ಗೆ ಯಾವುದೇ ಪ್ರಶ್ನೆ ಇಲ್ಲ. ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಯಾರಾದರೂ ಊಟ ಮಾಡಿಕೊಳ್ಳಲಿ ಎಂದು ಬೊಮ್ಮಾಯಿ ತಿರುಗೇಟು ನೀಡಿದರು.
ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿ ವಿರೋಧಿಸಿ ಕರ್ನಾಟಕದ ವಿರುದ್ಧ ಆಗಸ್ಟ್ 5ರಷ್ಟು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರ ಇರಬಹುದು. ಆದರೆ ನಾವು ತಮಿಳುನಾಡು ಸರ್ಕಾರದ ಪರ ನಿಲ್ಲುತ್ತೇನೆ ಎಂದು ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು