ಗದಗ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಗದಗಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಪಕ್ಷಕ್ಕೆ ಇನ್ನು ಐದು ವರ್ಷ ಅಧಿಕಾರ ನೀಡುವಂತೆ ಜನತೆಯನ್ನು ಕೋರಿದರು.
ತಾನು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡುತ್ತಿದ್ದುದು ಎಲ್ಲರಿಗೂ ಗೊತ್ತಿರುವ ವಿಚಾರ. ಆಗಲೇ ಸುಗ್ನಳ್ಳಿ ಕೆರೆಯ ಅಭಿವೃದ್ಧಿಗೆ ಅನುದಾನ ಒದಗಿಸಿದ್ದೆ. ಈಗ ಕೆರೆ ಹೂಳೆತ್ತುವ ಮತ್ತು ಅಭಿವೃದ್ಧಿ ಸಂಬಂಧಿತ ಕೆಲಸಗಳಿಗೆ ಗುದ್ದಲಿ ಪೂಜೆ ಮಾಡುವ ಕಾರ್ಯಕ್ರಮಗೆ ನನಗೆ ಆಹ್ವಾನ ನೀಡಿದ್ದರು, ನಾನು ಅದಕ್ಕಾಗಿ ಬಂದಿದ್ದೆ. ಶಿರಹಟ್ಟಿಯ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಖುದ್ದು ಈ ಆಹ್ವಾನ ನೀಡಿದ್ದರು. ಉಸ್ತುವಾರಿ ಸಚಿವರಾದ ಸಿ ಸಿ ಪಾಟೀಲ್ ಜೊತೆಯೂ ತಾನು ಮಾತನಾಡಿದ ನಂತರವೇ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗಕ್ಕೆ ಆಗಮಿಸಿದ್ದೆ. ಆದರೆ ಅನಿರೀಕ್ಷಿತವಾಗಿ ನಿನ್ನೆ ರಾತ್ರಿ ಈ ಕಾರ್ಯಕ್ರಮ ರದ್ದಾಗಿದೆ.
ಹೀಗೆ ಧಿಡೀರನೆ ಕಾರ್ಯಕ್ರಮ ಯಾಕೆ ರದ್ದಾಗಿದೆ ಎಂದು ನನಗೂ ಗೊತ್ತಿಲ್ಲ, ಆದರೆ ಅಭಿವೃದ್ಧಿಯ ಕೆಲಸದಲ್ಲಿ ರಾಜಕೀಯ ಮಾಡಬೇಡಿ ಎಂದು ಜನಪ್ರತಿನಿಧಿಗಳಿಗೆ ಸಲಹೆ ನೀಡುತ್ತೇನೆ ಎಂದು ಎಚ್ಡಿಕೆ ಹೇಳಿದ್ರು. ಇದರೊಂದಿಗೆ ಜನ ತಮ್ಮನ್ನು ಯಾರು ಆಳಬೇಕು ಎನ್ನುವುದನ್ನು ಸರಿಯಾಗಿ ನಿರ್ಧರಿಸಬೇಕು ಎಂದು ಈ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ವಿವರವಾಗಿ ತಿಳಿಸಿದರು.
ಐದು ವರ್ಷ ಅವಕಾಶ ಕೊಟ್ಟು ನೋಡಿ ಎಂದು ಜನತೆಯ ಆಶೀರ್ವಾದ ಬಯಸಿದ ಹೆಚ್ಡಿ ಕುಮಾರ ಸ್ವಾಮಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.