News Karnataka Kannada
Saturday, April 27 2024
ಕರ್ನಾಟಕ

ಕಪ್ಪು ಶಿಲೀಂಧ್ರ ಸೋಂಕು: ರಾಜ್ಯದಲ್ಲಿ ಒಟ್ಟು 441 ಸಾವು

Ita Covid19 Mng 06082021
Photo Credit :

ಬೆಂಗಳೂರು: ತಡವಾಗಿ ರೋಗ ಪತ್ತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಒಂದು ತಿಂಗಳಲ್ಲಿ 128 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 441ಕ್ಕೆ ಏರಿದೆ.

ಕಳೆದ ಒಂದು ತಿಂಗಳಲ್ಲಿ 253 ಮಂದಿಗೆ ಈ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,841ಕ್ಕೆ ಏರಿದೆ. ವರದಿಯಾದ ಒಟ್ಟು ಪ್ರಕರಣಗಳಲ್ಲಿ ಶೇ 30ಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿಯೇ ದೃಢಪಟ್ಟಿವೆ. ಈವರೆಗೆ 1,212 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಅವರಲ್ಲಿ 149 ಮಂದಿ ಸಾವಿಗೀಡಾಗಿದ್ದಾರೆ.

ಧಾರವಾಡದಲ್ಲಿ 342, ವಿಜಯಪುರ 228, ಕಲಬುರ್ಗಿಯಲ್ಲಿ 213, ಬಳ್ಳಾರಿಯಲ್ಲಿ 169, ಚಿತ್ರದುರ್ಗದಲ್ಲಿ 165, ಬೆಳಗಾವಿಯಲ್ಲಿ 159, ರಾಯಚೂರಿನಲ್ಲಿ 141, ಮೈಸೂರಿನಲ್ಲಿ 132, ಬಾಗಲಕೋಟೆಯಲ್ಲಿ 131, ದಾವಣಗೆರೆಯಲ್ಲಿ 123, ಕೋಲಾರದಲ್ಲಿ 114, ಹಾಗೂ ದಕ್ಷಿಣ ಕನ್ನಡದಲ್ಲಿ 103 ದೃಢ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗೆ ಇದೆ.

13 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿದೆ. ಧಾರವಾಡದಲ್ಲಿ 40, ಬಳ್ಳಾರಿಯಲ್ಲಿ 28, ದಕ್ಷಿಣ ಕನ್ನಡದಲ್ಲಿ 25, ಕಲಬುರ್ಗಿಯಲ್ಲಿ 24, ದಾವಣಗೆರೆ ಹಾಗೂ ಮೈಸೂರಿನಲ್ಲಿ ತಲಾ 20, ಶಿವಮೊಗ್ಗದಲ್ಲಿ 15, ಬಾಗಲಕೋಟೆಯಲ್ಲಿ 13, ರಾಯಚೂರಿನಲ್ಲಿ 12, ಕೋಲಾರ, ಹಾಸನ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಹಾಗೂ ಗದಗದಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು