ಬೆಂಗಳೂರು: ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಗುರುವಾರ ಬಿಜೆಪಿ ಸೇರ್ಪಡೆಗೊಂಡರು.
ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯಿಂದ ಗೆದ್ದಿದ್ದ ಮಹೇಶ್ ಅವರು ಜೆಡಿಎಸ್– ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸರ್ಕಾರದ ಪತನದ ಬಳಿಕ ಅವರು ಬಿಜೆಪಿಯತ್ತ ಮುಖ ಮಾಡಿದರು. ಈ ಕಾರಣಕ್ಕೆ ಬಿಎಸ್ಪಿಯಿಂದ ಅವರನ್ನು ಉಚ್ಚಾಟಿಸಲಾಗಿತ್ತು.
ಮಹೇಶ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿ, ಮಹೇಶ್ ಚಳವಳಿಯಿಂದ ಬಂದವರು. ಶಾಸಕರಾಗುವ ಮೊದಲೇ ದಲಿತ ಸಮುದಾಯದ ಹೃದಯವನ್ನು ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಒಟ್ಟಾಗಿ ಇವರನ್ನು ಶಾಸಕರನ್ನಾಗಿ ಆರಿಸಿದ್ದಾರೆ. ಇತರ ಜನಾಂಗದವರೂ ಪ್ರೀತಿ ಹೊಂದಿದ್ದಾರೆ ಎಂದರು.