ಬೆಂಗಳೂರು: ಅರಣ್ಯ ಮತ್ತು ಮೃಗಪಕ್ಷಿಗಳು ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ, ಧರ್ಮದ ಭಾಗವಾಗಿದೆ. ಈ ಬ್ರಹ್ಮಾಂಡದಲ್ಲಿ ಎಲ್ಲ ಜೀವಿಗಳಿಗೂ ಬದುಕುವ ಸಮಾನ ಅವಕಾಶವಿದೆ. ಹಕ್ಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.
ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ಹೊಸ ಸರ್ಕಾರ ಬಂದಿದೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಗೂ ಹೊಸ ಹುರುಪು ನೀಡಲು ಲಾಂಛನ ಬಿಡುಗಡೆ ಮಾಡಲಾಗಿದೆ. ಅರಣ್ಯ ಸಚಿವಾಲಯ ಹಲವು ದಶಕಗಳಿಂದ ಅಸ್ತಿತ್ವದಲ್ಲಿದೆ. ಆದರೆ ಈ ಇಲಾಖೆಗೆ ತನ್ನದೇ ಆದ ಸ್ವಂತ ಲಾಂಛನ ಇರಲಿಲ್ಲ. ಈಗ ಆ ಕಾಲ ಕೂಡಿ ಬಂದಿದೆ. ಇಲಾಖೆಯ ಉದ್ದೇಶ, ಮೌಲ್ಯಗಳು ಮತ್ತು ಕಾರ್ಯವನ್ನು ಪ್ರತಿನಿಧಿಸುವ ರೀತಿಯಲ್ಲಿ ಲಾಂಛನವನ್ನು ರೂಪಿಸಲಾಗಿದೆ ಎಂದರು.
ನಮ್ಮ ರಾಷ್ಟ್ರ ಲಾಂಛನದಲ್ಲೂ ನಾಲ್ಕು ಮುಖದ ಸಿಂಹ ಇದೆ. ನಮ್ಮ ರಾಜ್ಯದ ಲಾಂಛನದಲ್ಲೂ ಸಿಂಹ ಇದೆ ಜೊತೆಗೆ ಸಿಂಹದ ದೇಹ ಮತ್ತು ಸೊಂಡಿಲಿರುವ ಕಾಲ್ಪನಿಕ ಮೃಗವೂ ಇದೆ. ಹಸಿರೂ ಇದೆ ಮಿಗಿಲಾಗಿ ಗಂಡಬೇರುಂಡ ಪಕ್ಷಿ ಇದೆ. ವಿಧಾನಸೌಧದ ಗೋಪುರದಲ್ಲೂ ಸಿಂಹ ಲಾಂಛನವಿದೆ. ಅಂದರೆ ವನ್ಯಮೃಗಗಳು ನಮ್ಮ ಆಡಳಿತದಲ್ಲಿ ಹಾಸು ಹೊಕ್ಕಾಗಿವೆ ಎಂದರೆ ತಪ್ಪಾಗಲಾರದು.
ಕರ್ನಾಟಕ ನಕ್ಷೆಯ ಆಕಾರದಲ್ಲಿರುವ ಲಾಂಛನದಲ್ಲಿ ರಾಷ್ಟ್ರೀಯ ಪ್ರಾಣಿ ಹುಲಿ, ರಾಜ್ಯಪಕ್ಷಿ ನೀಲಕಂಠ, ರಾಜ್ಯ ಪ್ರಾಣಿ ಆನೆ, ರಾಜ್ಯದ ಹಿರಿಮೆ ಮತ್ತು ಗರಿಮೆಯಾದ ಶ್ರೀಗಂಧ, ರಾಜ್ಯ ಚಿಟ್ಟೆ ಸೌಥೆರ್ನ್ ಬರ್ಡ್ ವಿಂಗ್, ಮತ್ತು ಇವೆಲ್ಲಕ್ಕೂ ಮೂಲಾಧಾರವಾದ ಜಲಸಂಪನ್ಮೂಲವಿದ್ದು ಇಲಾಖೆಯನ್ನು ಸೂಕ್ತವಾಗಿ ಪ್ರತಿನಿಧಿಸುತ್ತದೆ ಎಂದರು.
ವಿಧಾನ ಸೌಧದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದೆ.
ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಹಸಿರು ವ್ಯಾಪ್ತಿ ಹೆಚ್ಚಳ, ಕರ್ತವ್ಯ ನಿರ್ಲಕ್ಷ್ಯಕ್ಕೆ ಕಠಿಣ ಕ್ರಮದ ಎಚ್ಚರಿಕೆ.
ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ… pic.twitter.com/sbYdTcsNFm
— Eshwar Khandre (@eshwar_khandre) June 26, 2023