News Karnataka Kannada
Monday, April 29 2024
ಬೆಂಗಳೂರು

ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

Gehlot Delhi 6 7 21
Photo Credit :

ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಲಿದ್ದಾರೆ.
ಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್​ ನೇಮಕವಾಗುವ ಜತೆಗೆ ಒಟ್ಟು 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ. ಜಾರ್ಖಂಡ್​, ಹರಿಯಾಣ, ಮಿಜೋರಾಂ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗೋವಾ, ತ್ರಿಪುರಾ ರಾಜ್ಯಗಳಿಗೂ ಹೊಸ ರಾಜ್ಯಪಾಲರು ನೇಮಕವಾಗಿದ್ದಾರೆ. ಮಿಜೋರಾಂಗೆ ಹರಿಬಾಬು ಕಂಭಂಪತಿ, ಮಧ್ಯಪ್ರದೇಶಕ್ಕೆ ಮಂಗೂಭಾಯ್ ಛಗನ್‌ಭಾಯ್ ಪಟೇಲ್, ಹಿಮಾಚಲಪ್ರದೇಶಕ್ಕೆ ರಾಜೇಂದ್ರನ್ ವಿಶ್ವನಾಥ್ ಅರ್ಲೇಕರ್, ಗೋವಾಕ್ಕೆ ಪಿ.ಎಸ್.ಶ್ರೀಧರನ್ ಪಿಳ್ಳೈ, ತ್ರಿಪುರಾಕ್ಕೆ ಸತ್ಯದೇವ್ ನಾರಾಯಣ್ ಆರ್ಯ, ಜಾರ್ಖಂಡ್​ಗೆ ರಮೇಶ್ ಬೈಸ್, ಹರಿಯಾಣಕ್ಕೆ ಬಂಡಾರು ದತ್ತಾತ್ತ್ರೇಯ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್​ ಸದ್ಯ ಕೇಂದ್ರ ಸಚಿವರಾಗಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ತಾವರ್‌ಚಂದ್ ಗೆಹ್ಲೋಟ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು