News Karnataka Kannada
Monday, May 06 2024
ಬೆಂಗಳೂರು

ಕಸಾಪ: ಪುಸ್ತಕಗಳಿಗೆ ರಿಯಾಯಿತಿ ಘೋಷಣೆ

Kannada Sahitya 12082021
Photo Credit :

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ತನ್ನ ಪ್ರಕಟಣೆಯ ಎಲ್ಲ ಪುಸ್ತಕ ಗಳಿಗೆ ಶೇ 10ರಿಂದ ಶೇ 75ರವರೆಗೆ ರಿಯಾಯಿತಿ ಘೋಷಿಸಿದೆ.

ಈ ಕೊಡುಗೆ ಆಗಸ್ಟ್ ತಿಂಗಳು ಪೂರ್ತಿ ಇರಲಿದೆ. ರಜಾ ದಿನಗಳು ಸೇರಿದಂತೆ ವಾರದ ಎಲ್ಲ ದಿನಗಳು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆ ಯವರೆಗೆ ಪರಿಷತ್ತಿನ ಪುಸ್ತಕ ಮಾರಾಟ ವಿಭಾಗದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತದೆ.

ಕನ್ನಡ ರತ್ನಕೋಶ, ಸಂಕ್ಷಿಪ್ತ ಕನ್ನಡ ನಿಘಂಟು ಹಾಗೂ ಸಂಕ್ಷಿಪ್ತ ಕನ್ನಡ ಇಂಗ್ಲಿಷ್ ನಿಘಂಟಿಗೆ ಶೇ 10ರಷ್ಟು ರಿಯಾಯಿತಿ ಸಿಗಲಿದೆ. ಬೃಹತ್ ಕನ್ನಡ–ಕನ್ನಡ ನಿಘಂಟು ಪರಿಷತ್ತಿನ ಸದಸ್ಯರಿಗೆ ಶೇ 25ರಷ್ಟು ಹಾಗೂ ಸದಸ್ಯತ್ವ ಹೊಂದಿಲ್ಲದವರಿಗೆ ಶೇ 20ರಷ್ಟು ರಿಯಾಯಿತಿ ನಿಗದಿಪಡಿಸಲಾಗಿದೆ. ಪರೀಕ್ಷಾ ಪಠ್ಯಪುಸ್ತಕಗಳನ್ನು ಹೊರತುಪಡಿಸಿ ಉಳಿದ ಪುಸ್ತಕಗಳಿಗೆ ಶೇ 50ರಷ್ಟು ಹಾಗೂ ಸ್ಮರಣ ಸಂಚಿಕೆಗಳಿಗೆ ಶೇ 75ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಪುಸ್ತಕ ಮಾರಾಟಗಾರರು, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಂಶೋಧಕರು, ಜನಸಾಮಾನ್ಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು