News Karnataka Kannada
Thursday, May 02 2024
ಬೆಂಗಳೂರು

ಕಾಂಗ್ರೆಸ್‌ನಲ್ಲಿ ಚಾಲಕರ ಘಟಕ ಆರಂಭ: ಡಿ.ಕೆ. ಶಿವಕುಮಾರ್ ಘೋಷಣೆ

D K Shiva Kumar 26 7 21
Photo Credit :

ಬೆಂಗಳೂರು: ವಾಹನ ಚಾಲಕರಿಗೂ ಸಮಾಜದಲ್ಲಿ ಗೌರವಯುತ ಸ್ಥಾನಮಾನ ನೀಡಲು ಮತ್ತು ಅವರ ಸಮಸ್ಯೆಗಳಿಗೆ ಧ್ವನಿಯಾಗುವ ಉದ್ದೇಶದಿಂದ ಕಾಂಗ್ರೆಸ್‌ ಪಕ್ಷದಲ್ಲಿ ಚಾಲಕರ ಘಟಕ ಆರಂಭಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ಆಟೊ, ಟ್ಯಾಕ್ಸಿ, ಓಲಾ, ಉಬರ್‌, ಬಸ್‌, ಲಾರಿ ಸೇರಿದಂತೆ ವಿವಿಧ ಚಾಲಕರ ಸಂಘಟನೆಗಳ ಪದಾಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ 41 ಲಕ್ಷ ಜನರು ಚಾಲಕ ವೃತ್ತಿಯಲ್ಲಿ ದುಡಿಯುತ್ತಿದ್ದಾರೆ. ಅವರಲ್ಲಿ 25 ಲಕ್ಷ ಜನರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿದ್ದಾರೆ’ ಎಂದರು.

ಪ್ರದೇಶ ಕಾಂಗ್ರೆಸ್ ಸಮಿತಿಯ ಅಡಿಯಲ್ಲಿ ಚಾಲಕರ ಘಟಕ ಆರಂಭಿಸುವಂತೆ ‍ಪಕ್ಷದ ಹಿರಿಯ ನಾಯಕರಾದ ಆಸ್ಕರ್‌ ಫರ್ನಾಂಡಿಸ್‌ ಸಲಹೆ ನೀಡಿದ್ದರು. ಅದರಂತೆ ರಾಜ್ಯದ ಎಲ್ಲ ಜಿಲ್ಲೆಗಳ ಚಾಲಕರನ್ನೂ ಒಳಗೊಂಡ ನೂತನ ಚಾಲಕರ ಘಟಕ ಆರಂಭಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 100 ಮಂದಿ ಚಾಲಕರನ್ನು ಸದಸ್ಯರನ್ನಾಗಿ ನೋಂದಣಿ ಮಾಡಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು