ಚಿಕ್ಕಮಗಳೂರು ;ಕಾಂಗ್ರೆಸ್ ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರ ಕಾಂಗ್ರೆಸ್ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್ಗೆ ಇರುವ ಒಂದು ಮಾದರಿ ಎಂದರು.
ಡಿ.ಕೆ.ಶಿವಕುಮಾರ್ ಅವರು ಬೆಳೆದು ಬಂದ ರೀತಿಯಲ್ಲೇ ಆಲೋಚನೆ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿ ಅವರು ತನ್ನ ಮೇಲೆ ಗೂಂಡಾ ಅಂತ ಬಂದಾಗ ಗೂಂಡಾಗಳಿಗೆ ನಾವು ವಿಶೇಷವಾದ ಆದ್ಯತೆ ಕೊಡಬೇಕೆಂದು ಅವರೇ ಹೇಳಿದ್ದಾರೆ. ಅದನ್ನ ಅವರೇ ಒಪ್ಪಿದ್ದಾರೆ. ಮುಂದೆ ಜನ ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕಿದೆ. ಉಳಿದವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡಬೇಕಾಗಿದೆ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.