News Karnataka Kannada
Friday, May 10 2024
ಕರ್ನಾಟಕ

ಕಾವೇರಿ ತುಲಾ ಸಂಕ್ರಮಣ: ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

Photo Credit :

ಕಾವೇರಿ ತುಲಾ ಸಂಕ್ರಮಣ: ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಡಿಕೇರಿ: ತಲಕಾವೇರಿಯಲ್ಲಿ ಅ.17ರಂದು ಪವಿತ್ರ ಕಾವೇರಿ ತೀರ್ಥೋದ್ಭವವಾಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕಿದ್ದು, ಸಿದ್ಧತೆ ಬಗ್ಗೆ ಭಾಗಮಂಡಲ-ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಾತ್ರಾ ಮಹೋತ್ಸವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಈ ಬಾರಿ ಆಚರಿಸಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದರು.

ಪವಿತ್ರ ತೀರ್ಥೋದ್ಭವಕ್ಕೆ ಇನ್ನೂ ಕೆಲವೇ ದಿನಗಳು ಇದ್ದು, ಈ ಹಿನ್ನೆಲೆಯಲ್ಲಿ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಿ. ತೀರ್ಥೋದ್ಭವ ದಿನದಂದು ಯಾವುದೇ ಗೊಂದಲಗಳಿಗೆ ಅವಕಾಶ ಮಾಡದೆ, ಜನರು ಗುಂಪು ಸೇರದಂತೆ ನಿಗದಿತ ಸ್ಥಳಗಳಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಭಾಗಮಂಡಲ-ತಲಕಾವೇರಿ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಅವರು ಪವಿತ್ರ ತೀರ್ಥೋದ್ಭವ ಸಿದ್ಧತೆ ಬಗ್ಗೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮದನ್ ಮೋಹನ್, ಡಿವೈಎಸ್‍ಪಿ ದಿನೇಶ್ ಕುಮಾರ್, ತಹಶೀಲ್ದಾರ್ ಮಹೇಶ್, ತಲಕಾವೇರಿ ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಭಾಗಮಂಡಲ ಪಿಡಿಒ, ಉಪ ತಹಶೀಲ್ದಾರರು ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು