ಕಾಸರಗೋಡು: ಕಾಸರಗೋಡಿನಲ್ಲಿ ಎಟಿಎಂ ಕಳವಿಗೆ ವಿಫಲ ಯತ್ನ ನಡೆದಿದೆ. ರೈಲ್ವೆ ನಿಲ್ದಾಣ ದಲ್ಲಿರುವ ಎಸ್ ಬಿ ಐ ಬ್ಯಾಂಕ್ ನ ಎಟಿಎಂನಲ್ಲಿ ಕಳವು ಯತ್ನ ನಡೆದಿದ್ದು, ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ.
ಎಟಿಎಂ ಮೆಷಿನ್ ನನ್ನು ಒಡೆಯಲು ಯತ್ನಿಸಿದ್ದು, ಹಾನಿಗೀಡಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು, ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ನಿಂದ ಹಣ ಕಳವಾಗಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಸಿಸಿಟಿವಿ ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.