News Karnataka Kannada
Sunday, May 05 2024
ಕರ್ನಾಟಕ

ಕಾಸರಗೋಡು ಸಂಸದರ ಭಾವಚಿತ್ರಕ್ಕೆ ಬಣ್ಣ ಬಳಿದ ದುಷ್ಕರ್ಮಿಗಳು

Photo Credit :

ಕಾಸರಗೋಡು ಸಂಸದರ ಭಾವಚಿತ್ರಕ್ಕೆ ಬಣ್ಣ ಬಳಿದ ದುಷ್ಕರ್ಮಿಗಳು

ಕಾಸರಗೋಡು: ಸೇತುವೆ ಉದ್ಘಾಟನೆಗೆ ಹಾಕಲಾಗಿದ್ದ ಕಮಾನಿನಲ್ಲಿನ ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಭಾವಚಿತ್ರಕ್ಕೆ ಬಣ್ಣ ಬಳಿದ ಘಟನೆ ಪೆರಿಯದಲ್ಲಿ ನಡೆದಿದ್ದು, ರಾಜಕೀಯ ವಿರೋಧಿಗಳು ಕೃತ್ಯ ನಡೆಸಿರುವುದಾಗಿ ಆರೋಪಿಸಲಾಗಿದೆ.

ರಾಜ್ಯದ ಅತೀ ಎತ್ತರ ಸೇತುವೆಯಾಗಿರುವ ಆಯಂಕದವು ಸೇತುವೆಯ ಲೋಕಾರ್ಪಣೆ ಡಿ. 8ರಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೆರವೇರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ರಾಜ್ಯದ ಸಚಿವರು, ಸ್ಥಳೀಯ ಶಾಸಕರ ಭಾವಚಿತ್ರವನ್ನು ಒಳಗೊಂಡ ಕಮಾನು ಹಾಕಲಾಗಿತ್ತು.

ಆದರೆ ಕಾಂಗ್ರೆಸ್ ಸಂಸದರಾಗಿರುವ ರಾಜ್ ಮೋಹನ್ ಉಣ್ಣಿತ್ತಾನ್ ಭಾವಚಿತ್ರಕ್ಕೆ ಬಣ್ಣ ಹಚ್ಚಿ ವಿಕ್ರತಗೊಳಿಸಿದ್ದು, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದೆ.

ಈ ಘಟನೆಗೆ ಪ್ರತಿಕ್ರಿಯೆ ನೀಡಿರುವ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ನನ್ನ ಭಾವಚಿತ್ರಕ್ಕೆ ಹಾನಿ ಎಸಗಿದರೂ ಜನರ ಮನಸ್ಸಿನಿಂದ ನನ್ನನ್ನು ದೂರ ಮಾಡಲು ಯಾವ ರಾಜಕೀಯ ವಿರೋಧಿಗಳಿಗೂ ಸಾಧ್ಯ ಇಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು