ಹುಬ್ಬಳ್ಳಿ: ಚುನಾವಣಾ ಪ್ರಚಾರದ ವೇಳೆ ಅಧಿಕಾರಕ್ಕೆ ಬಂದರೆ 24 ಗಂಟೆಗಳ ಒಳಗಡೆ ಸಾಲಮನ್ನಾ ಎಂದು ಹೇಳಿದ್ದ ಕುಮಾರಸ್ವಾಮಿ ಅವರು, ಈಗ ಸಮ್ಮಿಶ್ರ ಸರಕಾರ ರಚನೆಯಾಗಿದೆ. ಸಾಲಮನ್ನಾ ಸಾಧ್ಯವಿಲ್ಲವೆಂದು ಹೇಳಿರುವುದು ಪಲಾಯನವಾದ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದರು.
ಕುಮಾರಸ್ವಾಮಿ ಅವರು ನನಗೆ ಬಹುಮತ ಬಂದಿಲ್ಲವೆಂದು ಹೇಳಿದ್ದಾರೆ. ನನಗೆ ಕನ್ನಡಿಗರ ಮುಲಾಜಿಲ್ಲ, ಕಾಂಗ್ರೆಸ್ ನವರ ಮುಲಾಜಿನಲ್ಲಿದ್ದೇನೆ ಎಂದು ಹೇಳೀರುವುದು ರೈತರಿಗೆ ಮಾಡಿರುವ ದ್ರೋಹವಾಗಿದೆ ಎಂದು ಶೆಟ್ಟರ್ ತಿಳಿಸಿದರು.
ಹುಬ್ಬಳ್ಳಿ ಕರ್ನಾಟಕ ಬಂದ್ ಪ್ರಯುಕ್ತ ನಡೆದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.