ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಿಎಂಟಿಸಿ ಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡ್ತಿದ್ದ ಆರೋಪಿಗಳು. ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶವನ್ನು ಬಂಧಿತರು ದುರ್ಬಳಕೆ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.