ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ದೊಡ್ಡಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.
ಮೂವರು ಬಾಲಕರು ನಿನ್ನೆ ಮಧ್ಯಾಹ್ನ ಮನೆಯಿಂದ ಹೋದ ಬಾಲಕರು ಸಂಜೆಯಾದರೂ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದು, ಬಳಿಕ ಕೆರೆಯಲ್ಲಿ ಈಜುಲು ಹೋಗಿರುವ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ.
ಜಗಳೂರು ಪಟ್ಟಣದ ಮೂವರು ಬಾಲಕರು ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಮೊಹಮ್ಮದ್ ಆಫಾನ್ (10), ಮೊಹಮ್ಮದ್ ಆಶಿಕ್ (8) ಹಾಗೂ ಸೈಯದ್ ಫೈಜಾನ್ (11) ಮೃತ ಬಾಲಕರು.