ನವ ದೆಹಲಿ : ಕೊಡಗು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಕೋರೋನಾ ಸೋಂಕು ನಿಯಂತ್ರಣಕ್ಕೆ ಬಾರದಿರುವ ಹಿನ್ನಲೆಯಲ್ಲಿ ನಾಳೆ ಶನಿವಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸುವುದಾಗಿ ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಕೋರೋನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದ ಗಡಿ ರಾಜ್ಯಗಳಿಂದ ಕನಾ೯ಟಕಕ್ಕೆ ಆಗಮಿಸುವವರು ಕೋವಿಡ್ ನೆಗೆಟೀವ್ ರಿಪೋಟ್೯ ಕಡ್ಡಾಯವಾಗಿ ತರಬೇಕೆಂದು ಸೂಚಿಸಲಾಗಿದೆ. ಕೇರಳದಲ್ಲಿ ಕೋರೋನಾ ಸೋಂಕು ಹೆಚ್ಚಳದಿಂದಾಗಿ ಕೇರಳ – ಕನಾ೯ಟಕದ ಗಡಿಭಾಗದಲ್ಲಿ ಮತ್ತಷ್ಟು ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ನಾಳೆ ಕೊಡಗೂ ಸೇರಿದಂತೆ ಮೈಸೂರು, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ ಲಸಿಕೆ ಪ್ರಮಾಣ, ಕೋವಿಡ್ ಹೆಚ್ಚಳಕ್ಕೆ ಕಾರಣವಾಗುತ್ತಿರುವ ಅಂಶಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ತೀಮಾ೯ನ ಕೈಗೊಳ್ಳಲಾಗುತ್ತದೆ ಎಂದರು. ಈಗಾಗಲೇ ಕೇರಳದಲ್ಲಿ ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕೊಡಗಿನ ಗಡಿಯಲ್ಲಿ ಕೋವಿಡ್ ಸಂಬಂಧಿತ ಕಟ್ಟೆಚ್ಚರಕ್ಕೆ ಸೂಚನೆ ; ಬೊಮ್ಮಾಯಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.