ಬೆಂಗಳೂರು ; ಕೊರೊನಾದ ಸಂಭಾವ್ಯ 3ನೇ ಅಲೆಯನ್ನು ತಡೆಯಲು ರಾಜ್ಯಸರ್ಕಾರ ಈಗಾಗಲೇ ಬಿಗಿಕ್ರಮಗಳನ್ನು ಕೈಗೊಂಡಿದ್ದು, ಕೊರೊನಾ ಪರೀಕ್ಷೆ ನಿರ್ವಹಣೆಯಲ್ಲೂ ನೂತನ ಕಾರ್ಯತಂತ್ರ ಅಳವಡಿಸಿಕೊಳ್ಳಲಾಗಿದೆ.
ಈಗಿನ ಕೊರೊನಾ ಪರೀಕ್ಷೆಯ ನಿರ್ವಹಣೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, 3ನೇ ಅಲೆಯಲ್ಲಿ ಮಕ್ಕಳು ಹೆಚ್ಚು ಬಾಧಿತರಾಗುತ್ತಾರೆ ಎಂಬ ಹಿನ್ನೆಲೆಯಲ್ಲಿ 18 ವರ್ಷ ಒಳಗಿನ ಮಕ್ಕಳಿಗೂ ಕೊರೊನಾ ಪರೀಕ್ಷೆಗೆ ಒಳಪಡಿಸುವುದರ ಜತೆಗೆ ಜಿಲ್ಲಾವಾರು ಪರೀಕ್ಷಾ ಗುರಿಯನ್ನು ಏರಿಸಲಾಗಿದೆ. ಪ್ರತಿದಿನ ನಡೆಸುವ ಕೊರೊನಾ ಪರೀಕ್ಷೆಯಲ್ಲಿ ಕನಿಷ್ಠ ಶೇ. 10 ರಷ್ಟು ಕೊರೊನಾ ಪರೀಕ್ಷೆಯನ್ನು 18 ವರ್ಷ ಕೆಳಗಿನ ಮಕ್ಕಳಿಗೆ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೊರೊನಾ ಸಂಭಾವ್ಯ 3ನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆ ನಿರ್ವಹಣೆಗೆ ನೂತನ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಜಿಲ್ಲಾವಾರು ಕೊರೊನಾ ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ ಎಂದೂ ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ. ಪ್ರತಿದಿನ ನಡೆಯುವ ಕೊರೊನಾ ಪರೀಕ್ಷೆಯಲ್ಲಿ ಶೇ. 10 ರಷ್ಟು ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಲು ಸೂಚನೆ ನೀಡಲಾಗಿದೆ. ಹಾಗೆಯೇ, ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ ಶೇ. 50 ರಷ್ಟು ಪರೀಕ್ಷೆಗಳನ್ನು ತಾಲ್ಲೂಕು ಕೇಂದ್ರದ ಹೊರಗೆ ನಡೆಸಲು ಸೂಚಿಸಲಾಗಿದೆ ಎಂದವರು ಟ್ವೀಟ್ ಮಾಡಿದ್ದಾರೆ.ಪಾಸಿಟಿವಿಟಿ ದರ ಶೇ. 5 ಕ್ಕಿಂತ ಕಡಿಮೆ ಇರುವ ಗ್ರಾಮಪಂಚಾಯ್ತಿ ಮತ್ತು ಪಟ್ಟಣ ಪ್ರದೇಶಗಳಲ್ಲಿ ರೋಗರಹಿತ ಲಕ್ಷಣ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅವರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಕೊರೊನಾ ಪರೀಕ್ಷೆ ನಿರ್ವಹಣೆ ಬದಲಾವಣೆ ; ಸಚಿವ ಸುಧಾಕರ್ ಮಾಹಿತಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.