News Karnataka Kannada
Sunday, April 28 2024
ಕರ್ನಾಟಕ

ಕೊರೊನಾ ಮುಕ್ತವಾಗಿ ಮುಂದುವರೆದಿರುವ ಚಾಮರಾಜನಗರ ಜಿಲ್ಲೆಗೆ ಕೇಂದ್ರ ಆರೋಗ್ಯ ಸಚಿವರಿಂದ ಪ್ರಶಂಸೆ

Photo Credit :

 ಕೊರೊನಾ ಮುಕ್ತವಾಗಿ ಮುಂದುವರೆದಿರುವ ಚಾಮರಾಜನಗರ ಜಿಲ್ಲೆಗೆ ಕೇಂದ್ರ ಆರೋಗ್ಯ ಸಚಿವರಿಂದ ಪ್ರಶಂಸೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವರಾದ ಡಾ. ಹರ್ಷವರ್ಧನ್ ಅವರು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ರೆಡ್‍ಕ್ರಾಸ್ ವತಿಯಿಂದ ವಿಶ್ವ ಪರಿಸರ ದಿನ ಅಂಗವಾಗಿ ಪೊಲೀಸ್ ಉಪ ಅಧೀಕ್ಷರ ಕಚೇರಿ ಮುಂಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳು ದೂರವಾಣಿ ಕರೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೇಳೆ ಈ ವಿಷಯ ತಿಳಿಸಿದರು.

ಗುರುವಾರ ಸಂಜೆ ಕೇಂದ್ರ ಆರೋಗ್ಯ ಸಚಿವರು ದೂರವಾಣಿ ಮೂಲಕ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ಹಸಿರು ವಲಯವನ್ನಾಗಿ ಕಾಪಾಡಿಕೊಂಡಿರುವ ಬಗ್ಗೆ ಜಿಲ್ಲೆಯ ಜನತೆ, ಅಧಿಕಾರಿಗಳು ಹಾಗೂ ನನಗೆ ಶುಭ ಹಾರೈಸಿದ್ದಾರೆ ಎಂದರು.

ಕೇಂದ್ರ ಆರೋಗ್ಯ ಸಚಿವರು ದೂರವಾಣಿ ಕರೆ ಮಾಡಿರುವುದು ನನಗೆ ಆಶ್ಚರ್ಯ ಹಾಗೂ ಸಂತಸ ಉಂಟುಮಾಡಿದೆ. ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸುವ ಕಾರ್ಯವು ಮುಂದುವರೆಯಲಿ ಎಂದು ಸಚಿವರು ಶ್ಲಾಘಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಅವರು ತಿಳಿಸಿದರು.

ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯಲು ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಒಂದು ತಂಡವಾಗಿ ಸತತವಾಗಿ ಕೆಲಸ ನಿರ್ವಹಿಸಿದ್ದಾರೆ. ಜನಪ್ರತಿನಿಧಿಗಳು ಸಹ ಪ್ರೋತ್ಸಾಹ, ಸಹಕಾರ ನೀಡುವ ಮೂಲಕ ಜಿಲ್ಲೆ ಕೋವಿಡ್ ಮುಕ್ತವಾಗಿ ಮುಂದುವರೆದುಕೊಂಡು ಬಂದಿದೆ. ವಿಶೇಷವಾಗಿ ಜಿಲ್ಲೆಯ ಜನರು ಲಾಕ್‍ಡೌನ್ ಅವಧಿಯಲ್ಲಿ ಜಾಗೃತರಾಗಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿದ್ದಾರೆ. ಹೀಗಾಗಿ ಜಿಲ್ಲೆ ಹಸಿರು ವಲಯದಲ್ಲಿ ಉಳಿದಿದೆ. ಮುಂದೆಯೂ ಸಹ ಜಿಲ್ಲೆಯನ್ನು ಹಸಿರು ವಲಯದಲ್ಲಿಯೇ ಉಳಿಸಿಕೊಂಡು ಹೋಗುವ ಸವಾಲು ನಮ್ಮ ಮುಂದಿದೆ. ಜನರ ಸಹಕಾರ ಇದೇ ರೀತಿ ಇರಲಿ ಎಂದು ತಾವು ಬಯಸುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು