ಬೆಂಗಳೂರು, ; – ಕೊರೊನಾ ನಿಯಂತ್ರಣಕ್ಕೆ ವೀಕೆಂಡ್ ಲಾಕ್ಡೌನ್ ಸಾಲುವುದಿಲ್ಲ. ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷಗಳ ಕಾಲ ಹಬ್ಬ, ಜಾತ್ರೆಗಳಿಗೆ ನಿಷೇಧ ಹೇರಬೇಕು. ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಕೇರಳ, ಮಹಾರಾಷ್ಟ್ರದ ಗಡಿಭಾಗದ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. 3ನೇ ಅಲೆ ಬರುವ ಆತಂಕವೂ ಇದೆ. ಹೀಗಾಗಿ ಕಟ್ಟೆಚ್ಚರ ಅಗತ್ಯವಿದ್ದು, ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಜನ ಕೂಡ ಮಾಸ್ಕ್ ಧರಿಸಬೇಕು, ಸರ್ಕಾರ ಹೆಚ್ಚು ಪ್ರಮಾಣದಲ್ಲಿ ಲಸಿಕೆ ತರಿಸಬೇಕು, 6 ವರ್ಷದ ಮಕ್ಕಳಿಗೂ ಲಸಿಕೆ ನೀಡಲು ಸಂಶೋಧನೆಗಳಾಗಬೇಕು, ಸಭೆಗಳ ಮೇಲೆ ಸಭೆ ನಡೆಸಿದರೆ ಸಾಲದು.ಯಡಿಯೂರಪ್ಪ ಕೂಡ ಸಭೆಗಳ ಮೇಲೆ ಸಭೆ ಮಾಡುತ್ತಿದ್ದರು. ಅದರಿಂದ ಏನೂ ಪ್ರಯೋಜನವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಇನ್ನು ಟೇಕಾಫ್ ಆಗಿಲ್ಲ. ಉಳಿದ ಅವಯನ್ನೂ ಪೂರೈಸುವುದಿಲ್ಲ. ಮಂತ್ರಿಯಾಗದೆ ಇರುವ ಬಹಳಷ್ಟು ಮಂದಿ ಬಿಜೆಪಿಯಲ್ಲಿದ್ದಾರೆ.ಅವರು ಹಂತ ಹಂತವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರು, ಚಾಮರಾಜನಗರ ಸೇರಿ 13 ಜಿಲ್ಲೆಗಳಿಗೆ ಸಂಪುಟದಲ್ಲಿ ಅವಕಾಶವೇ ಇಲ್ಲ. ಸರ್ಕಾರದಲ್ಲಿ ಇನ್ನೂ ಸಾಕಷ್ಟು ಗೊಂದಲಗಳಿವೆ. ಇದನ್ನೆಲ್ಲ ಬಗೆಹರಿಸುವುದರಲ್ಲಿ ಬಿಜಿ ಆಗಿರುವ ನಾಯಕರಿಗೆ ಕೊರೋನ ನಿಯಂತ್ರಣ ಹಿನ್ನಡೆ ಆಗಿದೆ ಎಂದರು.
ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.