News Karnataka Kannada
Friday, May 17 2024
ಕರ್ನಾಟಕ

ಕೊರೋನಾ ಸ್ವ್ಯಾಬ್ ಸಂಗ್ರಹಕ್ಕೆ ಬಿಎಸ್ಸಿ ವಿದ್ಯಾರ್ಥಿಗಳ ಬಳಕೆ

Photo Credit :

ಕೊರೋನಾ ಸ್ವ್ಯಾಬ್ ಸಂಗ್ರಹಕ್ಕೆ ಬಿಎಸ್ಸಿ ವಿದ್ಯಾರ್ಥಿಗಳ ಬಳಕೆ

ರಾಮನಗರ: ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲು ಸ್ವ್ಯಾಬ್ ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿರುವ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಪರೀಕ್ಷೆಯ ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳನ್ನು ತೆರೆದು ತರಬೇತಿ ನೀಡಲಾಗುವ ವಿದ್ಯಾರ್ಥಿಗಳನ್ನು ನಿಯೋಜಿಸಿಕೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಕೋವಿಡ್ ಲಕ್ಷಣವುಳ್ಳ ರೋಗಿ ಪರೀಕ್ಷೆಗೆ ಒಳಪಡಬೇಕೆಂದರೆ ಯಾವುದೇ ಕಾರಣಕ್ಕೂ ಅವರು ಪರೀಕ್ಷೆಯಿಂದ ವಂಚಿತರಾಗಬಾರದು ಎಂದರು.

ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟವರಿಗೆ 24 ಗಂಟೆಯೊಳಗೆ ಪರೀಕ್ಷೆಯ ವರದಿ ನೀಡಬೇಕು. ಪರೀಕ್ಷೆಯ ವರದಿ ಬ್ಯಾಕ್‍ಲಾಗ್ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ರೋಗಿಗಳನ್ನು ಒಳಪಡಿಸುವಾಗ ಸರಿಯಾದ ವಿಳಾಸ ಪಡೆದುಕೊಳ್ಳುವುದು ಕಡ್ಡಾಯ. ಇಲ್ಲವಾದರೆ ಪಾಸಿಟಿವ್ ಬಂದ ಸಂದರ್ಭದಲ್ಲಿ ಪತ್ತೆಹಚ್ಚುವುದು ಕಷ್ಟಕರವಾಗುತ್ತದೆ ಹಾಗೂ ರೋಗ ಕೂಡ ಹರಡುತ್ತದೆ. ಐ.ಎಲ್.ಐ ಮತ್ತು ಎಸ್.ಎ.ಆರ್.ಐ ಪ್ರಕರಣಗಳಲ್ಲಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು  ನಡೆಸಬೇಕು ಎಂದರು.

ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡದ ಅವಶ್ಯಕತೆಯಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸುವುದು. ಮಂಡ್ಯ ಜಿಲ್ಲೆಯ ನಂತರ ಬೆಂಗಳೂರಿಗೆ ತಲುಪವವರೆಗೂ ಮೈಸೂರು -ಬೆಂಗಳೂರು  ಹೆದ್ದಾರಿಯಲ್ಲಿ ಯಾವುದೇ ಟ್ರಾಮಾ ಸೆಂಟರ್ ಇಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸೇರಿದಂತೆ ಆಸ್ಪತ್ರೆಗೆ ಬೇಕಿರುವ ಸಿಬ್ಬಂದಿ, ಸಲಕರಣೆಗಳ ವಿವರದ ಮಾಹಿತಿಯನ್ನು ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು