ಕೊಪ್ಪಳ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಹುಲಿಹೈದರದ ಮಹಾಂತೇಶ ನಾಯಕ, ಹನುಮೇಶ ನಾಯಕ ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿ ನ್ಯಾಯಾಂಗ ವಶದಲ್ಲಿದ್ದರು, ಅವರು ಈಗ ಜಾಮೀನಿನ ಮೇಲೆ ಹೊರ ಬಂದಿದ್ದು ಪ್ರಮುಖ ಆರೋಪಿಯ ಮದುವೆಗೆ ಗಂಗಾವತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು, ಅಧಿಕಾರಿಗಳು ಮದುವೆಯಲ್ಲಿ ಡ್ರೆಸ್ ನೊಂದಿಗೆ ಭಾಗಿಯಾಗಿರುವ ಕುರಿತು ಸಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆದಿತ್ತು, ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜನಿಕೊಪ್ಪ, ಗಂಗಾವತಿ ಗ್ರಾಮೀಣ ಠಾಣೆಯ ಉದಯರವಿ ಹಾಗು ಕನಕಗಿರಿ ಪಿಎಸ್ಐ ತಾರಾಬಾಯಿ ಭಾಗಿಯಾಗಿದ್ದರು, ಇದು ಪೊಲೀಸ್ ಇಲಾಖೆಗೆ ಮುಜುಗರ ತರುವಂತೆ ಮಾಡಿದ್ದರಿಂದ ಮದುವೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣದಿಂದ ಕಡ್ಡಾಯ ರಜೆ ಮೇಲೆ ಹೋಗಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ.
2015 ಜನವರಿ 11 ರಂದು ಕನಕಗಿರಿ ತಾಲೂಕಿನ ಕನಕಾಪುರದ ಯಲ್ಲಾಲಿಂಗ ಎಂಬ ವಿದ್ಯಾರ್ಥಿ ಯನ್ನು ಕೊಲೆ ಮಾಡಿ ಕೊಪ್ಪಳ ರೈಲು ನಿಲ್ದಾಣದ ಬಳಿಯ ಹಳಿಯ ಮೇಲೆ ಹಾಕಿ ಆತ್ಮಹತ್ಯೆ ಎಂಬಂತೆ ಬಿಂಬಿಸಲಾಗಿತ್ತು, ಆದರೆ ಕುಟುಂಬದವರಯ ಹಾಗು ಪ್ರಗತಿಪರ ಸಂಘಟನೆಯವರ ಮನವಿಯ ಮೇರಿಗೆ ಅಂದಿನ ಪೊಲೀಸರು ತನಿಖೆ ಮಾಡಿದಾಗ ಇದು ಕೊಲೆ ಎಂದು ಕೊಲೆಯಲ್ಲಿ ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ ಪುತ್ರ ಮಹಾಂತೇಶ ನಾಯಕ ಹಾಗು ಇತರ 9 ಜನರು ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ 9 ಜನರನ್ನು ಬಂಧಿಸಿ ನ್ಯಾಯಾಂಗ ವಿಚಾರಣೆ ನಡೆಸಲಾಗುತ್ತಿದೆ.
ಕನಕಾಪುರದ ಯಲ್ಲಾಲಿಂಗ ತಮ್ಮ ಗ್ರಾಮದ ಸಮಸ್ಯೆ ಕುರಿತು ಸ್ಥಳೀಯ ಚಾನೆಲ್ ಗೆ ಹೇಳಿಕೆ ನೀಡಿದ್ದರು, ಇದರಿಂದ ಕುಪಿತಗೊಂಡ ಮಹಾಂತೇಶ ನಾಯಕ ಹಾಗು ತಂಡ ಯಲ್ಲಾಲಿಂಗ ಕೊಲೆ ಮಾಡಿದ್ದರು.
ಕೊಲೆ ಆರೋಪಿ ಮದುವೆಯಲ್ಲಿ ಭಾಗವಹಿಸಿದ್ದ ಪೋಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.