ಬೆಂಗಳೂರು:ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸ್ ಆಗುವವರಿಗೆ ಆರ್ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ವರದಿ ನೀಡುವ ನಿಯಮಕ್ಕೆ ಬ್ರೇಕ್ ಬಿದ್ದಿದ್ದು, ಸದ್ಯ ಪ್ರಯಾಣಿಕರು ವರದಿ ತೋರಿಸದೆ ನಿರಾಳವಾಗಿ ಓಡಾಡಬಹುದಾಗಿದೆ.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆಯ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ.
ಆದರೆ, ಕೋವಿಡ್ ಪರೀಕ್ಷೆ ಇಲ್ಲದಿದ್ದರೂ ಕೆಲ ಷರತ್ತುಗಳು ಅನ್ವಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಮಾರ್ಗಸೂಚಿ ಪಾಲನೆ ಕಡ್ಡಾಯ:
*ಮಹಾರಾಷ್ಟ್ರದಲ್ಲಿ ಕೇವಲ 2 ದಿನಗಳು ಇದ್ದು ವಾಪಸಾಗುವ ಪ್ರಯಾಣಿಕರಿಗೆ ಈ ನಿಯಮ ಅನ್ವಯ ಆಗಲಿದೆ.
*ಮಹಾರಾಷ್ಟ್ರದಿಂದ ವಾಪಸಾಗುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಕಡ್ಡಾಯ.
*ಎರಡನೇ ಡೋಸ್ ಲಸಿಕೆ ಪಡೆದು 14 ದಿನಗಳಾಗಿರಬೇಕು.
*ಕೋವಿಡ್ ಗುಣಲಕ್ಷಣಗಳನ್ನು ಹೊಂದಿರಬಾರದು.
*ಜ್ವರ, ಶೀತ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆಯಿಂದ ಮುಕ್ತರಾಗಿರಬೇಕು.
*ವಾಪಸಾಗುವಾಗ ಮಹಾರಾಷ್ಟ್ರದಲ್ಲಿ ಕೇವಲ ಎರಡು ದಿನಗಳು ಮಾತ್ರ ಇದ್ದ ಬಗ್ಗೆ ಟಿಕೆಟ್ ಪ್ರೊಡ್ಯೂಸ್ ಮಾಡಬೇಕು.
*7 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಆರೋಗ್ಯದ ಬಗ್ಗೆ ನಿಗಾ ಇಡಬೇಕು.
*ಒಂದು ವೇಳೆ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ತಕ್ಷಣ ಟೆಸ್ಟ್ ಮಾಡಿಸಬೇಕು.