News Karnataka Kannada
Monday, April 29 2024
ಮಹಾರಾಷ್ಟ್ರ

ಕೊವೀಡ್ 19 ಅಪ್ಡೇಟ್ಸ್: ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಲ್ಲ

Covid
Photo Credit :

ಬೆಂಗಳೂರು:ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸ್​ ಆಗುವವರಿಗೆ ಆರ್​​ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ವರದಿ ನೀಡುವ ನಿಯಮಕ್ಕೆ ಬ್ರೇಕ್ ಬಿದ್ದಿದ್ದು, ಸದ್ಯ ಪ್ರಯಾಣಿಕರು ವರದಿ ತೋರಿಸದೆ ನಿರಾಳವಾಗಿ ಓಡಾಡಬಹುದಾಗಿದೆ.

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆಯ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಆದರೆ, ಕೋವಿಡ್ ಪರೀಕ್ಷೆ ಇಲ್ಲದಿದ್ದರೂ ಕೆಲ ಷರತ್ತುಗಳು ಅನ್ವಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮಾರ್ಗಸೂಚಿ ಪಾಲನೆ ಕಡ್ಡಾಯ:

*ಮಹಾರಾಷ್ಟ್ರದಲ್ಲಿ ಕೇವಲ 2 ದಿನಗಳು ಇದ್ದು ವಾಪಸಾಗುವ ಪ್ರಯಾಣಿಕರಿಗೆ ಈ ನಿಯಮ ಅನ್ವಯ ಆಗಲಿದೆ.

*ಮಹಾರಾಷ್ಟ್ರದಿಂದ ವಾಪಸಾಗುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ‌ಕಡ್ಡಾಯ.

*ಎರಡನೇ ಡೋಸ್ ಲಸಿಕೆ ಪಡೆದು 14 ದಿನಗಳಾಗಿರಬೇಕು.

*ಕೋವಿಡ್ ಗುಣಲಕ್ಷಣಗಳನ್ನು ಹೊಂದಿರಬಾರದು.

*ಜ್ವರ, ಶೀತ, ಕೆಮ್ಮು, ಗಂಟಲು‌ ನೋವು, ಉಸಿರಾಟದ ತೊಂದರೆಯಿಂದ ಮುಕ್ತರಾಗಿರಬೇಕು.

*ವಾಪಸಾಗುವಾಗ ಮಹಾರಾಷ್ಟ್ರದಲ್ಲಿ ಕೇವಲ ಎರಡು ದಿನಗಳು ಮಾತ್ರ ಇದ್ದ ಬಗ್ಗೆ ಟಿಕೆಟ್ ಪ್ರೊಡ್ಯೂಸ್ ಮಾಡಬೇಕು‌.

*7 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಆರೋಗ್ಯದ ಬಗ್ಗೆ ನಿಗಾ ಇಡಬೇಕು.

*ಒಂದು ವೇಳೆ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ತಕ್ಷಣ ಟೆಸ್ಟ್ ಮಾಡಿಸಬೇಕು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು