ಬೆಂಗಳೂರು: ರಾಜ್ಯದಲ್ಲಿ 1,432 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,34,624ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 27 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,088ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 318 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,157ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 326 ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 1,538 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,76,377ಕ್ಕೆ ಏರಿಕೆಯಾಗಿದೆ. ಇನ್ನು 21,133 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,76,977 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,432 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.80ಕ್ಕೆ ಇಳಿದಿದೆ.