News Karnataka Kannada
Saturday, April 27 2024
ಕರ್ನಾಟಕ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ನೂರಕ್ಕೂ ಹೆಚ್ಚು ಜನರ ಘರ್‌ ವಾಪಸಿ

Ghar Vapsi,
Photo Credit :

ಗೌರಿಬಿದನೂರು : ಭಾರತ ಮಾತಾ ಸೇವಾ ಟ್ರಸ್ಟ್ ಅಡಿಯಲ್ಲಿ ಇಂದು ವಿಶೇಷ ಪೂಜೆ ನಡೆಸುವ ಮೂಲಕ ‌ತಾಲೂಕಿನ ನಾಗಸಂದ್ರ ಗ್ರಾಮದ ಸುಮಾರು 10 ಕುಟುಂಬಗಳಿಗೆ ಸೇರಿದ 100ಕ್ಕೂ ಅಧಿಕ ಜನರನ್ನು ಮರಳಿ ಹಿಂದೂ ಧರ್ಮಕ್ಕೆ ಬರಮಾಡಿಕೊಳ್ಳಲಾಯಿತು.
ತಾಲೂಕಿನ ಇತಿಹಾಸಪ್ರಸಿದ್ಧ ವಿದುರಾಶ್ವತ್ಥ ಸ್ವಾಮಿ ದೇಗುಲದ ಸಭಾಂಗಣದಲ್ಲಿ ವಿವಿಧ ಹೋಮ- ಹವನಗಳನ್ನು ನಡೆಸಿ, ಪೂಜೆ ಸಲ್ಲಿಸಿ ನಂತರ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ಸೇರ್ಪಡೆಗೊಳಿಸಲಾಯಿತು.’ಮರುಳು ಮಾತಿಗೆ ಮಾರು ಹೋಗಿ ಮತಾಂತರಗೊಳ್ಳುತ್ತಿರುವುದು ಹೆಚ್ಚುತ್ತಿದೆ. ಯಾವುದೇ ಧರ್ಮವಾಗಿರಲಿ ಜೀವನ ನಡೆಸುವುದಕ್ಕೆ ತಮ್ಮದೇ ಆದ ಆತ್ಮಬಲ, ದೈಹಿಕ ಬಲ, ಮನಃಶಾಂತಿ ಇಟ್ಟುಕೊಳ್ಳಬೇಕು. ಮತಾಂತರಗೊಳ್ಳುವುದರಿಂದಲೇ ಸಮಸ್ಯೆ ಬಗೆಹರಿಯಲಿದೆ ಎಂಬುದು ತಪ್ಪು ಕಲ್ಪನೆ’ ಎಂದು ಭಾರತಮಾತಾ ಸೇವಾ ಟ್ರಸ್ಟ್ ಅದ್ಯಕ್ಷ ಎನ್‌ ಎಂ ರವಿ ನಾರಾಯಣ ರೆಡ್ಡಿ ಹೇಳಿದ್ದಾರೆ. ಈ ಕುಟುಂಬಗಳಿಗೆ ಭಾರತ ಮಾತಾ ಸೇವಾ ಟ್ರಸ್ಟ್ ವತಿಯಿಂದ ಆರೋಗ್ಯ ಕಾರ್ಡ್ ಹಸ್ತಾಂತರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು