ಬೆಂಗಳೂರು, ; ಬಯಸಿದ ಖಾತೆ ನೀಡಿಲ್ಲ ಎಂದು ಮುನಿಸಿಕೊಂಡು ಖಾತೆ ಬದಲಾವಣೆಗೆ ಒತ್ತಡ ಹೇರಿರುವ ಸಚಿವರಿಗೆ ಬಿಜೆಪಿ ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿರ್ವಹಿಸದಿದ್ದರೆ ರಾಜೀನಾಮೆ ಸ್ವೀಕರಿಸುವ ಸಂದೇಶ ರವಾನಿಸಿದೆ. ಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆಗೆ ಮತ್ತೆ ಒತ್ತಡ ಹಾಕಿ ರಾಜೀನಾಮೆ ಕೊಡುವ ಬ್ಲಾಕ್ಮೇಲ್ ಮಾಡಿದರೆ, ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಖಾತೆ ಬದಲಾವಣೆಯಿಂದ ಹಿಂದಕ್ಕೆ ಸರಿದಿರುವ ಸಚಿವ ಆನಂದ್ ಸಿಂಗ್ ಇರುವ ಖಾತೆಯಲ್ಲಿಯೇ ಮುಂದುವರೆಯಲು ತೀರ್ಮಾನಿಸಿದ್ದಾರೆ. ಯಾಕೆಂದರೆ ಖಾತೆ ಬದಲಾವಣೆಗೆ ಒತ್ತಾಯಿಸಿ ಯಾರಾದರೂ ರಾಜೀನಾಮೆ ಕೊಟ್ಟಲ್ಲಿ ಅದನ್ನು ಪಡೆದು ಬೇರೆಯವರಿಗೆ ಸಚಿವ ಸ್ಥಾನ ಕೊಡಿ ಎಂದು ಹೈಕಮಾಂಡ್ ಸಿಎಂ ಬೊಮ್ಮಾಯಿ ಅವರಿಗೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿಯಿದೆ.
ಖಾತೆ ಬದಲಾವಣೆಗೆ ಒತ್ತಾಯಿಸುತಿದ್ದ ಆನಂದ್ ಸಿಂಗ್ ಗೆ ಬಿಜೆಪಿ ಹೈಕಮಾಂಡ್ ತಿರುಗೇಟು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.