News Karnataka Kannada
Sunday, May 05 2024
ಕರ್ನಾಟಕ

ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ; ಸಾವಿರಾರು ರೂ. ಮೌಲ್ಯದ ಔಷಧಿ ವಶ

Photo Credit :

ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ; ಸಾವಿರಾರು ರೂ. ಮೌಲ್ಯದ ಔಷಧಿ ವಶ

ಚಿತ್ತ್ರದುರ್ಗ, : ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್‌ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಖಾಸಗಿ ಕ್ಲಿನಿಕ್ ಮೇಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿ, ಸಾವಿರಾರು ರೂಪಾಯಿ ಮೌಲ್ಯದ ಔಷಧಿಗಳನ್ನು ವಶಪಡಿಸಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿರಿಯೂರು ತಹಶೀಲ್ದಾರ ಜಿ.ಎಚ್ ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್ಒ ಡಾ.ವೆಂಕಟೇಶ್ ನೇತೃತ್ವದ ಜಂಟಿ ತಂಡ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿವೇಕಾನಂದ ಬಂಧಿತ ಆರೋಪಿ ಎನ್ನಲಾಗಿದೆ. ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್‌ಗಳು ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಜವನಗೊಂಡನಹಳ್ಳಿಯ ಮನೆಯಲ್ಲಿ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಎನ್ನಲಾಗಿದೆ. ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಮಾರಾಟ ಮಾಡಿ, ಹಣಗಳಿಸುತ್ತಿದ್ದನು ಎಂದು ತಿಳಿದು ಬಂದಿದೆ. ಈ ಮೂಲಕ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದ ಆರೋಪಿಯ ವಿರುದ್ಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು