ಮಂಡ್ಯ, ; ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ನಿನ್ನೆಯೂ ಕೂಡ ಸ್ಫೋಟಕಗಳು ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ಬನ್ನಂಗಾಡಿ ಗ್ರಾಮದ ವ್ಯಾಪ್ತಿಯ ಸರ್ವೆ ನಂ.24ರ ಗೋಮಾಳದಲ್ಲಿ 92 ಜಿಲೆಟಿನ್ ಟ್ಯೂಬ್ಗಳು, ಹಾಗೂ 50 ಮೀಟರ್ ಉದ್ದದ ಮೆಗ್ಗಾರ್ ಬ್ಲಾಸ್ಟ್ಗೆ ಬಳಸುವ ವಾಹಕ (ತಂತಿ) ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ತಕ್ಷಣ ಕಾರ್ಯೋನ್ಮುಖರಾದ ಕೆಆರ್ ಎಸ್ ಪೊಲೀಸರು ಸ್ಥಳಕ್ಕೆ ತೆರಳಿ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಿಡಿಡಿಎಸ್ ತಂಡ, ಗಣಿ ಮತ್ತು ಭೂ ವಿಜ್ಞಾನ ಇಲಾ ಖೆಯ ಅಧಿಕಾರಿಗಳು ತೆರಳಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಮೂರು ದಿನಗಳ ಕಾಲ ಸ್ಫೋಟಕ ಮತ್ತು ನಿಷ್ಕ್ರಿಯ ದಳದ ಅಧಿಕಾರಿಗಳ ತಂಡ ಶೋಧ ನಡೆಸಿ, ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಿ ಕಾರ್ಯಾಚರಣೆ ಮುಕ್ತಾಯಗೊಳಿಸಿದ್ದರು. ಬೇಬಿ ಬೆಟ್ಟ ಗಣಿಗಾರಿಕೆ ಪ್ರದೇಶದ ಚಿನಕುರಳಿ, ಹೊನಗಾನಹಳ್ಳಿ, ರಾಗಿ ಮುದ್ದನಹಳ್ಳಿ, ಶಿಂಡಭೋಗನಹಳ್ಳಿ ವ್ಯಾಪ್ತಿಯ ಕ್ವಾರಿ ಮತ್ತು ಕ್ರಷರ್ಗಳಲ್ಲಿ ಶೋಧ ನಡೆಸಿದ್ದರು. ಎರಡನೇ ದಿನ ಮತ್ತು ಮೂರನೇ ದಿನ ಸ್ಫೋಟಕಗಳು ನಿರೀಕ್ಷಿತ ಮಟ್ಟದಲ್ಲಿ ಪತ್ತೆಯಾಗಿ ರಲಿಲ್ಲ. ಹೀಗಾಗಿ ಬೆಂಗಳೂರು, ಮೈಸೂರು, ಹಾಸನ ಮತ್ತು ಮಂಡ್ಯದಿಂದ ಬಂದಿದ್ದ ಸ್ಫೋಟಕ ಪತ್ತೆ ದಳ ವಾಪಾಸಾಗಿತ್ತು.
ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ ವಶಪಡಿಸಿಕೊಂಡ ಅಧಿಕಾರಿಗಳು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.