ಕಾರವಾರ: ಗಣೇಶ ಚತುರ್ಥಿ ಆಚರಣೆ ಸಂಬಂಧ ಮುಂದಿನ ಹತ್ತು ದಿನದ ಪರಿಸ್ಥಿತಿ ಅವಲೋಕಿಸಿ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಶಿರಸಿ ನಗರದಲ್ಲಿ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಗೆ ಕಠಿಣ ನಿರ್ಬಂಧ ವಿಧಿಸದಂತೆ ಈಗಾಗಲೇ ಗಣೇಶೊತ್ಸವ ಸಮಿತಿ ಪ್ರಮುಖರ ನಿಯೋಗ ತಮ್ಮನ್ನು ಭೇಟಿ ಮಾಡಿದೆ. ಜನರ ಒತ್ತಾಯವನ್ನು ಸರ್ಕಾರಕ್ಕೂ ತಿಳಿಸಲಾಗಿದೆ. ಮುಂದಿನ ಸ್ಥಿತಿ ಗಮನಿಸಿ ಮುಖ್ಯಮಂತ್ರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ ಎರಡು ಸಾವಿರದಷ್ಟು ರೈತರಿಗೆ ಬಿಡುಗಡೆ ಆಗಬೇಕಿರುವ ಮೊತ್ತವನ್ನು ಶೀಘ್ರ ದೊರಕುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿದ್ದೇನೆ. ವಾರದೊಳಗೆ ಸಕಾರಾತ್ಮಕ ಫಲಿತಾಂಶ ಕಂಡುಕೊಳ್ಳಲಿದ್ದೇವೆ ಎಂದರು.