News Karnataka Kannada
Thursday, May 16 2024
ಕರ್ನಾಟಕ

ಗೆಲುವು ತಂದು ಕೊಟ್ಟ ಕಾರ್ಯಕರ್ತರಿಗೆ ಶಾಸಕ ಎ.ಮಂಜುರಿಂದ ಪ್ರವಾಸ ಭಾಗ್ಯ…

Photo Credit :

ಗೆಲುವು ತಂದು ಕೊಟ್ಟ ಕಾರ್ಯಕರ್ತರಿಗೆ ಶಾಸಕ ಎ.ಮಂಜುರಿಂದ ಪ್ರವಾಸ ಭಾಗ್ಯ...

ಮಾಗಡಿ: ಪ್ರಸ್ತುತ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ಸರ್ಕಾರ ರಚನೆ ಮಾಡಲು ಹೋರಾಟ ನಡೆಸುತ್ತಿದ್ದರೆ, ಅದಕ್ಕೂ ಮುನ್ನ ಕಾಂಗ್ರೆಸ್ ಗೆ ಸೆಡ್ಡು ಹೊಡೆದು ಗೆಲುವು ಸಾಧಿಸಲು ಕಾರಣ ಕರ್ತರಾದ ಕಾರ್ಯಕರ್ತರಿಗೆ ಮಾಗಡಿ ಶಾಸಕ ಎ.ಮಂಜು ಅವರು ಪ್ರವಾಸ ಭಾಗ್ಯವನ್ನು ಕಲ್ಪಿಸಿದ್ದಾರೆ.

ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣ ಪ್ರತಿಸ್ಪರ್ಥಿಯಾಗಿದ್ದರಲ್ಲದೆ, ಇವರ ನಡುವೆ ಭಾರೀ ದೊಡ್ಡ ಮಟ್ಟದ ಪೈಪೋಟಿ ಇತ್ತು.

ಈ ನಡುವೆ ಪಟ್ಟಣದ 1ನೇ ವಾರ್ಡಿನಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರಿಗೆ ಅತೀ ಹೆಚ್ಚು ಮತ ಬಂದಿದ್ದು ಈ ಹಿನ್ನೆಲೆಯಲ್ಲಿ ವಾರ್ಡಿನ ಗುತ್ತಿಗೆದಾರ ಕರಡಿ ನಾಗರಾಜು ನೇತೃತ್ವದಲ್ಲಿ 40ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಪ್ರವಾಸ ಭಾಗ್ಯವನ್ನು ಅವರು ಕಲ್ಪಿಸಿದ್ದಾರೆ.

ಈ ಸಂಬಂಧ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಗೋವಾ ಪ್ರವಾಸಕ್ಕೆ ಕಳುಹಿಸಿ ಮಾತನಾಡಿ ನಾಗರಾಜು ಅವರು, ಎ.ಮಂಜುರವರಿಗೆ ಅತೀ ಹೆಚ್ಚು ಲೀಡ್ ಕೊಟ್ಟಿರುವುದರಿಂದ 4 ಬ್ಯಾಚ್ ಗಳನ್ನಾಗಿ ಮಾಡಿ ಗೋವಾ ಮತ್ತು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಕಳುಹಿಸಲಾಗಿದೆ. ನಮ್ಮ ನಾಯಕರಾದ ಎ.ಮಂಜುರವರು ಶಾಸಕರಾಗಬೇಕೆಂದು ಹಗಲು ರಾತ್ರಿ ಎನ್ನದೆ ದುಡಿದಿದ್ದು ಈಗ ಗೆದ್ದ ನಂತರ ಕಾರ್ಯಕರ್ತರಿಗೆ ಮನೋರಂಜನೆಗೆ ಪ್ರವಾಸಕ್ಕೆ ಕಳುಹಿಸಲಾಗಿದೆ.

ಎ.ಮಂಜುರವರು ಈಗ ಬ್ಯೂಸಿಯಾಗಿದ್ದು ಮಾಗಡಿಗೆ ಬಂದ ನಂತರ ವಾರ್ಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಕಳೆದ 1 ತಿಂಗಳಿನಿಂದಲೂ ಹಗಲು ರಾತ್ರಿ ಎನ್ನದೆ ನಮ್ಮ ಪರವಾಗಿ ಕಾರ್ಯಕರ್ತರು ದುಡಿದಿದ್ದಾರೆ. ವಾರ್ಡಿನಲ್ಲಿ ನಮ್ಮ ಪರವಾಗಿ ಹೆಚ್ಚಿನ ಲೀಡ್ ಕೊಡಿಸಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರ ನಾಗರಾಜುರವರು ಪ್ರವಾಸಕ್ಕೆ ಕಳುಹಿಸಿದ್ದು ಇದು ಮತದಾರರಿಗೆ ಒಂದು ರೀತಿ ಕೃತಜ್ಞತೆ ಸಲ್ಲಿಸುವಂತಾಗಿದ್ದು ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು