ಮಂಗಳೂರು: ಪೊಲೀಸರ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಎ ಮತ್ತು ಎನ್ಆರ್ಸಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದ ಗೋಲಿಬಾರ್ ಹಿನ್ನೆಲೆಯಲ್ಲಿ ಪೊಲೀಸರ ಮನೆಯ ಮಹಿಳೆಯರನ್ನು ಅತ್ಯಾಚಾರ ಮಾಡಿ ಸುಡಬೇಕು ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನ ಹಳ್ಳಿಯ ಯೋಗಿ ಯಾನೆ ಯೋಗೇಶ್.ಎಸ್ (28) ಬಂಧಿತ ಆರೋಪಿ. 2019ರಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಯೋಗೇಶ್ ಎಂಬಾತ ಫೇಸ್ಬುಕ್ ಖಾತೆಯಲ್ಲಿ ಪೊಲೀಸರ ಮನೆಯ ಮಹಿಳೆಯರನ್ನು ಅವರ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಸುಟ್ಟು ಹಾಕಬೇಕು ಎಂದು ಪೋಸ್ಟ್ ಮಾಡಿದ್ದ.
ಇದನ್ನು ಮನಸುಗಳ ಮಾತು ಮಧುರ ಎಂಬ ಫೇಸ್ಬುಕ್ ಪೇಜ್ಗೆ ಟ್ಯಾಗ್ ಮಾಡಿ ಅದರ ಸ್ಕ್ರೀನ್ ಶಾಟ್ ತೆಗೆದು ವಾಟ್ಸಾಪ್ ಮೂಲಕ ಪ್ರಸಾರ ಮಾಡಲಾಗಿತ್ತು. ಇದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಲು ಮತ್ತು ಪೊಲೀಸ್ ಕುಟುಂಬಸ್ಥರ ವಿರುದ್ಧ ಘೋರಾಪರಾಧ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಮಾಡಲಾಗಿದೆ ಎಂದು ಮಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯೋಗೇಶ್ನನ್ನು ಬಂಧಿಸಿದ್ದಾರೆ.
ಗೋಲಿಬಾರ್ ವೇಳೆ ಪೊಲೀಸ್ ಮನೆಯವರ ಅತ್ಯಾಚಾರ ಮಾಡುವಂತೆ ಪೋಸ್ಟ್: ಆರೋಪಿ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.