ಮೈಸೂರು: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ ಎಂದು ಹೇಳಿದರು.
ನಾನು ಮೊದಲು ಮೈಸೂರಿಗೆ ಬಂದಾಗ ಎಲ್ಲರೂ ಗೇಲಿ ಮಾಡಿದ್ದರು. ದಸರಾ ಆಚರಣೆ ಮಾಡೋದು ಗೊತ್ತಿಲ್ಲ ಅಂತ ಗೇಲಿ ಮಾಡುತ್ತಿದ್ದರು. ಆದರೆ, ತಾಯಿ ಕೃಪೆಯಿಂದ ಅದನ್ನ ಮಾಡಿ ತೋರಿಸಿದ್ದೇನೆ ಎಂದರು.
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.