News Karnataka Kannada
Monday, May 13 2024
ಕರ್ನಾಟಕ

ಚಾರ್ಮಾಡಿ ಘಾಟ್: ಕಂದಕಕ್ಕೆ ಟ್ಯಾಂಕರ್ ಲಾರಿ ಉರುಳಿ ಚಾಲಕನಿಗೆ ತೀವ್ರ ಗಾಯ

Photo Credit :

 ಚಾರ್ಮಾಡಿ ಘಾಟ್: ಕಂದಕಕ್ಕೆ ಟ್ಯಾಂಕರ್ ಲಾರಿ ಉರುಳಿ ಚಾಲಕನಿಗೆ ತೀವ್ರ ಗಾಯ

ಮೂಡಿಗೆರೆ: ಮಂಗಳೂರಿನಿಂದ ಭದ್ರಾವತಿ ಕಡೆಗೆ ಚಾರ್ಮಾಡಿ ಘಾಟ್ ಮಾರ್ಗವಾಗಿ 20 ಸಾವಿರ ಲೀಟರ್ ಡಿಸೇಲ್ ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಲಾರಿಯು ಚಾಲಕನ ಹತೋಟಿ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಮಂಗಳೂರು ಮೂಲದ ರವಿ ಜಲಾಲ್ ಎಂಬವರಿಗೆ ಸೇರಿದ (ಕೆ.ಎ.19.ಎ.ಎ.9633) ಇಂಧನದ ಟ್ಯಾಂಕರ್ ಲಾರಿಯು ಚಾಲಕನ ಹತೋಟಿ ತಪ್ಪಿ ಚಾರ್ಮಾಡಿಯ ಬಲಭಾಗದ 200 ಮೀಟರ್ ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಚಾಲಕ ಲೋಕೇಶ್ ತೀವ್ರ ಸ್ವರೂಪದ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಅದೇ ಮಾರ್ಗದಲ್ಲಿ ಬರುತ್ತಿದ್ದ ವಾಹನದವರು ಕೊಟ್ಟಿಗೆಹಾರ ಅರಣ್ಯ ತಪಾಸಣಾ ಗೇಟಿನ ಅದಿಕಾರಿಗಳಿಗೆ ಲಾರಿ ಉರುಳಿರುವ ಬಗ್ಗೆ ಸುದ್ದಿ ಮುಟ್ಟಿಸಿದ್ದಾರೆ.ಅರಣ್ಯ ಅಧಿಕಾರಿಗಳು ಬಣಕಲ್ ಪೋಲಿಸರಿಗೆ ಮಾಹಿತಿ ತಿಳಿಸಿದ್ದು ರಾತ್ರಿಯೇ ಬಣಕಲ್ ಪೋಲಿಸರು ಸ್ಥಳಕ್ಕೆ ತೆರಳಿ ಚಾಲಕ ಲೋಕೇಶ್ನನ್ನು ಅಂಬುಲೆನ್ಸ್ ಮೂಲಕ ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಟ್ಯಾಂಕರ್ ಬಿದ್ದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದ್ದು ಡಿಸೇಲ್ ಸೋರುತ್ತಿರುವುದು ಕಂಡು ಬಂದಿದೆ. ತಕ್ಷಣ ಚಿಕ್ಕಮಗಳೂರು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ದೇವರಾಜ್ ನೇತ್ರತ್ವದ ತಂಡ ಚಾರ್ಮಾಡಿ ಘಾಟ್ಗೆ ಬಂದು ಸ್ಥಳದಲ್ಲಿ ಬೀಡು ಬಿಟ್ಟಿದ್ದು ಬೆಂಕಿ ಹೊತ್ತಿಕೊಳ್ಳದಂತೆ ಎಚ್ಚರಿಕೆ ವಹಿಸಲಾಗಿದೆ. ಉರುಳಿದ ಟ್ಯಾಂಕರ್ನಿಂದ ಇನ್ನೊಂದು ಟ್ಯಾಂಕರ್ಗೆ ಡಿಸೇಲ್ ತುಂಬಿಸಿ ಅನಂತರ ಲಾರಿಯನ್ನು ಎತ್ತಲಾಗುವುದು ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು