ಚಿಕ್ಕಮಗಳೂರು, – ರಾಷ್ಟೀಯ ಹೆದ್ದಾರಿ-73 ಚಾರ್ಮುಡಿ ಘಾಟ್ ರಸ್ತೆ ಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ದಿನ ಸಂಜೆ 7 ರಿಂದ ಬೆಳಗ್ಗೆ 6 ಗಂಟೆವರೆಗೆ ಇಂದಿನಿಂದ ಮುಂದಿನ ಆದೇಶದವರೆಗೆ ಕಾಲಮಿತಿ ನಿಗದಿಪಡಿಸಿ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.
ಸಾರ್ವಜನಿಕರು ಸಂಚರಿಸುವ ಕೆಎಸ್ಆರ್ಟಿಸಿ ಕೆಂಪು ಬಸ್ಸು, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೆಲರ್, ಆಂಬುಲೆನ್ಸ್ ಕಾರು, ಜೀಪು, ವ್ಯಾನ್, ಎಲ್ಸಿವಿ( ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಬೆಳಗ್ಗೆ 6 ರಿಂದ ಸಂಜೆ 7 ಗಂಟೆವರೆಗೆ ಸಂಚರಿಸಬಹುದಾಗಿದೆ.ಬುಲೆಟ್ ಟ್ಯಾಂಕರ್ಸ್, ಫಿಶ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾರ್ಸಿಸ್ ವಾಹನಗಳು, ಹೇವಿ ಕಮರ್ಷಿಯಲ್ ವಾಹನಗಳು, ಮಲ್ಟಿ ಎಕ್ಸೆಲ್, ಟ್ರಕ್ ಟ್ರೈಲರ್, ಕೆಎಸ್ಆರ್ಟಿಸಿ ರಾಜಹಂಸ ಬಸ್ಗಳು ಮತ್ತು ಎಲ್ಲಾಬಗೆಯ ಅಧಿಕ ಬಾರದ ಸರಕು ಸಾಗಾಣಿಕೆ ವಾಹನಗಳನ್ನು ದಿನದ 24 ಗಂಟೆಯು ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಆಂಬುಲೆನ್ಸ್ ವಾಹನಗಳಿಗೆ ಮಾತ್ರ ಈ ಆದೇಶದಿಂದ ವಿನಾಯಿತಿ ನೀಡಿದ್ದು, ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.
ಚಾರ್ಮಾಡೀ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.