News Karnataka Kannada
Monday, May 06 2024
ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಬಂದ್ ಗೆ ಉತ್ತಮ ಬೆಂಬಲ  

Photo Credit :

ಚಿಕ್ಕಮಗಳೂರಿನಲ್ಲಿ ಬಂದ್ ಗೆ ಉತ್ತಮ ಬೆಂಬಲ  

ಚಿಕ್ಕಮಗಳೂರು: ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲೆಯ ಬಹುತೇಕ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮಾಡಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಕಚೇರಿಯಿಂದಾ ಹನುಮಂತಪ್ಪ ವೃತ್ತದವರೆಗೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಇದೇ ಸಮಯದಲ್ಲಿ ಕನ್ನಡ ಪರ ಸಂಘಟನೆಯ ಇಬ್ಬರೂ ಕಾರ್ಯಕರ್ತರು ತಮ್ಮ ಕೇಶ ಮುಂಡನ ಮಾಡಿಸಿಕೊಂಡು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮಹದಾಯಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದೂ ಖಾಲಿ ಕೊಡಗಳನ್ನು ಪ್ರದರ್ಶನ ಮಾಡಿದರು.

ರೈತರೊಬ್ಬರಿಂದ ಏಕಾಂಗಿ ಹೋರಾಟ: ಬಂದ್ ಹಿನ್ನೆಲೆ ರೈತರೊಬ್ಬರು ಏಕಾಂಗಿ ಹೋರಾಟ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ರು. ನಗರದ ಹನುಮಂತಪ್ಪ ವೃತ್ತದಲ್ಲಿ ಸೈಕಲ್ ನಲ್ಲಿ ಹಸಿರು ಬಾವುಟ ಕಟ್ಟಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಮಳಲೂರು ಗ್ರಾಮದ ರೈತ ಚಂದ್ರೇಗೌಡ ಎಂಬುವರು ವಿಭಿನ್ನವಾಗಿ ಪ್ರತಿಭಟನೆ ಮಾಡಿದ ರೈತ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
179

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು