News Karnataka Kannada
Sunday, May 19 2024
ಕರ್ನಾಟಕ

ಚಿಗಳ್ಳಿ ಜಲಾಶಯದ ಒಡ್ಡಿಗೆ ಹಾನಿ: ಸಾವಿರಾರು ಎಕರೆ ಕೃಷಿ ಭೂಮಿಗೆ ನುಗ್ಗಿದ ನೀರು

Photo Credit :

ಚಿಗಳ್ಳಿ ಜಲಾಶಯದ ಒಡ್ಡಿಗೆ ಹಾನಿ: ಸಾವಿರಾರು ಎಕರೆ ಕೃಷಿ ಭೂಮಿಗೆ ನುಗ್ಗಿದ ನೀರು

ಕಾರವಾರ:ನೆರೆ ಪ್ರವಾಹದಿಂದ ಕೊಂಚ ಸುಧಾರಿಸಿಕೊಳ್ಳುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಭಾಗದ‌ ಜನರಿಗೆ ಇನ್ನೊಂದು ಗಂಡಾಂತರ ಎದುರಾಗಿದ್ದು, ಸಾವಿರಾರು‌ ಎಕರೆ‌ ಕೃಷಿ ಭೂಮಿಗೆ ಅಪಾರ ಪ್ರಮಾಣಲ್ಲಿ ನೀರು ನುಗ್ಗಿದೆ.

ಸಣ್ಣ ನೀರಾವರಿಯ ಯೋಜನೆ ಹೊಂದಿರುವ ಜಲಾಶಯವಾಗಿದ್ದು ಅದರ ಒಡ್ಡು ಒಡೆದು ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಮುಂಡಗೋಡ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗಿದ್ದು ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದೆ. ಅದರ ಒತ್ತಡದಿಂದ ಒಡ್ಡು ಒಡೆದು ಜಲಾಶಯದ ನೀರಿನಿಂದ ಕೃಷಿ ಭೂಮಿಗೆ ಹಾನಿಯಾಗಿದೆ. ಜನವಸತಿ ಪ್ರದೇಶಗಳಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಮುಂಡಗೋಡದ ಚಿಗಳ್ಳಿ ಜಲಾಶಯಕ್ಕೆ‌ ಹಾನಿಯಾಗಿದೆ‌ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದ್ದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದರು.‌ ಆದರೆ ಡ್ಯಾಮ್ ಒಡೆದಿಲ್ಲ ಎಂದು‌ ಅಧಿಕಾರಿಗಳು‌ ಸ್ಪಷ್ಟ ಪಡಿಸಿದ ಬಳಿಕ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಳಭಾಗದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು