ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್-2020ನ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕನ್ನಡಿಗ ಕಾಶೀನಾಥ್ ನಾಯ್ಕ ಎಂಬ ಹೆಸರಿನ ಯಾವುದೇ ಕೋಚ್ ಅನ್ನು ನೇಮಕ ಮಾಡಿರಲಿಲ್ಲ ಎಂದು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ಸ್ಪಷ್ಟಪಡಿಸಿದ್ದಾರೆ.
ಕಾಶಿನಾಥ್ ಅವರು ಕೋಚ್ ಎಂಬ ಕಾರಣಕ್ಕೆ ಕರ್ನಾಟಕ ಸರ್ಕಾರ ಬಹುಮಾನ ಘೋಷಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ದೊರಕಿದರೆ ರಾಜ್ಯ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಲಾಗುವುದು ಎಂದು ಅದಿಲ್ಲೆ ತಿಳಿಸಿದ್ದಾರೆ. ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಕನ್ನಡಿಗ ಕಾಶಿನಾಥ್ ನಾಯ್ಕ್ ಕೋಚ್ ಆಗಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದು ಕರ್ನಾಟಕದ ಹೆಮ್ಮೆ ಎಂದು ರಾಜ್ಯ ಸರ್ಕಾರ ಕಾಶಿನಾಥ್ಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಆದರೆ, ಕಾಶಿನಾಥ್ ಅವರು ತಮ್ಮ ಕೋಚ್ ಎಂದು ನೀರಜ್ ಚೋಪ್ರಾ ಹೇಳಿಲ್ಲ, ನಾವೂ ಹೇಳಿಲ್ಲ. ಕಾಶಿನಾಥ್ ಯಾರು ಎಂಬುದೇ ನಮಗೆ ಗೊತ್ತಿಲ್ಲ. ಹೀಗಿರುವಾಗ ಕರ್ನಾಟಕ ಸರ್ಕಾರ ಅವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ನಮಗೆ ಅಧಿಕೃತ ಪತ್ರ ವ್ಯವಹಾರ ಆದ ಬಳಿಕ ಸಂಬಂಧಪಟ್ಟವರಿಗೆ ಈ ಬಗ್ಗೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.
ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಕನ್ನಡಿಗ ಕಾಶಿನಾಥ್ ಕೋಚ್ ಆಗಿರಲಿಲ್ಲ: ಅಥ್ಲೆಟಿಕ್ಸ್ ಫೆಡರೇಷನ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.