News Karnataka Kannada
Sunday, May 05 2024
ಕರ್ನಾಟಕ

ಚೆಕ್‌ ಪೋಸ್ಟ್‌ ನಲ್ಲಿ ತಹಸೀಲ್ದಾರ್‌ ಗೆ ಲಂಚ ; ಶಾಸಕ ಬೋಪಯ್ಯ ಆರೋಪ

K G Bopaiah Mla
Photo Credit :

 

ಮಡಿಕೇರಿ: ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೇ ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಅವರು ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಲಂಚ ನೀಡಿದರೆ ವಾಹನಗಳು ಸಲೀಸಾಗಿ ಪ್ರವೇಶಿಸಲು ಅನುವು ಮಾಡಿ ಕೊಡುತ್ತಾರೆ ಎಂದು ಆರೋಪ ಮಾಡಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೂತನ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಕೊವಿಡ್ ಪರಾಮರ್ಶೆ ಸಭೆ ನಡೆದ ಸಂದರ್ಭದಲ್ಲಿ ಶಾಸಕ ಕೆಜಿ ಬೋಪಯ್ಯ ಗರಂ ಆಗಿದ್ದು ಕೇರಳ ಗಡಿಗೆ ಹೊಂದಿಕೊಂಡಿರುವ ಚೆಕ್ ಪೋಸ್ಟ್​ಗಳಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಆಗುತ್ತಿಲ್ಲ ಎಂದು ದೂರಿದ್ದಾರೆ.
ಗಡಿ ತಪಾಸಣೆ ವೇಳೆ ತಹಶೀಲ್ದಾರ್​ಗೆ ಲಂಚ ಕೊಡಬೇಕು ಎಂದು ಗೇಟ್‌ ನಲ್ಲಿ ಇರುವವರು ಸಾವಿರ ರೂಪಾಯಿ ಸಂಗ್ರಹಿಸುತ್ತಿದ್ದಾರೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಯಾರೂ ಇಲ್ಲ. ಡಿಸಿ ಕೂಡ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ನಮ್ಮದೇ ಸರ್ಕಾರವಿದ್ದರೂ ನಮಗೆ ಅಧಿಕಾರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿ ಚಾರುಲತಾ ಸೋಮಲ್, ಹಾಗೆಲ್ಲಾ ಆರೋಪ ಮಾಡಬೇಡಿ ಸರ್ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಬೋಪಯ್ಯ ಸುಮ್ಮನೆ ಆರೋಪ ಮಾಡುತ್ತಿಲ್ಲ ಅದು ವಾಸ್ತವ ಎಂದು ಕುಟುಕಿದ್ದಾರೆ. ಒಂದೆಡೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳ ನಡುವೆ ಕೋವಿಡ್ ನಿಯಮಾವಳಿಗಳ ಪಾಲನೆ ವಿಷಯದಲ್ಲಿ ಭಿನ್ನಾಭಿಪ್ರಾಯವಿದ್ದರೆ, ಆರೋಪ ಇದ್ದರೆ ಮತ್ತೊಂದೆಡೆ ಸಚಿವ ಸ್ಥಾನ‌ ಸಿಗದ ಹತಾಶೆಯೂ ಎದ್ದು ಕಾಣುತ್ತಿತ್ತು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು