ಮಡಿಕೇರಿ: ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಎಂ.ಗಣೇಶ್ ನೇಮಕಗೊಂಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಇಂದು ಬೆಂಗಳೂರಿನಲ್ಲಿ ಗಣೇಶ್ ಅವರಿಗೆ ನೇಮಕಾತಿ ಆದೇಶ ಪ್ರತಿಯನ್ನು ನೀಡಿದರು.
ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಗಣೇಶ್ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಮ್ಮ ಆತ್ಮೀಯರಾದ ಹೆಚ್.ವಿಶ್ವನಾಥ್ ಅವರೊಂದಿಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು.