ರಾಮನಗರ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ಪ್ರಕಟನೆ ಹೊರಡಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಈಚೆಗೆ ಪುಟ್ಟಣ್ಣ ಅವರು ‘ನಾನು ಸೇರಿದಂತೆ ಜೆಡಿಎಸ್ ಬಹುತೇಕ ಪರಿಷತ್ ಸದಸ್ಯರು ಪಕ್ಷ ತೊರೆಯುವ ಚಿಂತನೆ ನಡೆಸಿದ್ದೇವೆ’ ಎಂದು ಹೇಳಿಕೆ ನೀಡಿದ್ದರು.