ಮಂಗಳೂರು, ; ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರಕರಣವೊಂದರ ಮಾತುಕತೆಗೆ ಠಾಣೆಗೆ ಆಗಮಿಸಿದ್ದ ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ಮಂಗಳೂರಿನ ಉರ್ವ ಠಾಣೆಯಲ್ಲಿ ನಡೆದಿದೆ. ಉರ್ವ ಪೊಲೀಸ್ ಠಾಣಾ ಸಿಬ್ಬಂದಿ ಪೂಜಾ ಹಿರೇಮಠ ಮತ್ತು ನಾರಾಯಣ ಹಲ್ಲೆಗೊಳಗಾದವರು. ಪ್ರಕರಣವೊಂದರ ಮಾತುಕತೆಗೆ ಉರ್ವ ಪೊಲೀಸ್ ಠಾಣೆಗೆ ಬುಧವಾರ ರಾತ್ರಿ ಮಂಗಳೂರು ನಗರ ನಿವಾಸಿಗಳಾದ ನೋವೆಲ್ ಸೀಕ್ವೇರಾ, ಜಾನ್ ಸೀಕ್ವೇರಾ ಮತ್ತೊಬ್ಬಳು ಯುವತಿ ಆಗಮಿಸಿದ್ದರು.
ಪೊಲೀಸ್ ಅಧಿಕಾರಿಯ ಜೊತೆ ಮಾತುಕತೆ ನಡೆಸುತ್ತಿರುವ ವೇಳೆ ನೋವೆಲ್ ಸ್ವೀಕ್ವೇರಾ ಮೊಬೈಲ್ನಲ್ಲಿ ಮಾತುಕತೆಯ ವಿಡಿಯೋ ಮಾಡಿದ್ದಾರೆ. ಇದನ್ನು ನೋಡಿದ ಪೂಜಾ ಹಿರೇಮಠ ವಿಡಿಯೋ ಮಾಡದಂತೆ ತಾಕೀತು ಮಾಡಿದ್ದಾರೆ.
ಪೊಲೀಸರ ಎಚ್ಚರಿಕೆಯ ಬಳಿಕವೂ ನೋವೆಲ್ ವಿಡಿಯೋ ಮಾಡಿದ್ದು, ಪೂಜಾ ಮೊಬೈಲ್ ಕಿತ್ತುಕೊಂಡಿದ್ದಾರೆ. ಈ ವೇಳೆ ಕಿತ್ತುಕೊಂಡ ಮೊಬೈಲ್ ವಾಪಸ್ ಕೊಡುವಂತೆ ನೋವೇಲ್ ಸೀಕ್ವೇರಾ ಪೊಲೀಸ್ ಸಿಬ್ಬಂದಿ ಪೂಜಾ ಹಿರೇಮಠ ಮೇಲೆ ದಾಳಿ ಮಾಡಿದ್ದಾನೆ.
ಜೊತೆಗಿದ್ದ ಸಿಬ್ಬಂದಿ ನಾರಾಯಣ್ ಮೇಲೂ ನೋವೇಲ್ ಸೇರಿದಂತೆ ಮತ್ತಿಬ್ಬರೂ ದಾಳಿ ಮಾಡಿದ್ದು, ಪೊಲೀಸರು ಯುವತಿ ಸೇರಿದಂತೆ ಮೂವರನ್ನೂ ಬಂಧಿಸಿದ್ದಾರೆ. ಗಾಯಾಳು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…