News Karnataka Kannada
Thursday, May 09 2024
ಕರ್ನಾಟಕ

ಡಿಕೆಶಿಗೆ ಹೇಳಿಕೆ ನೀಡುವ ಚಟ: ಸಚಿವ ಆರ್‌ ಅಶೋಕ್‌

Photo Credit :

ಡಿಕೆಶಿಗೆ ಹೇಳಿಕೆ ನೀಡುವ ಚಟ: ಸಚಿವ ಆರ್‌ ಅಶೋಕ್‌

ಮಡಿಕೇರಿ : ಮುಖ್ಯಮಂತ್ರಿ ಬಿ ಯಸ್‌ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಯಾವುದೇ ವಿಡಿಯೊ ದಾಖಲೆಗಳಿದ್ದರೂ ಕೊಡಲಿ.

ಆ ಬಗ್ಗೆ ಸರ್ಕಾರ ತನಿಖೆ ನಡಸಲಿದೆ ಆಧರೆ ಅವರಿಗೆ ಇರುವುದು ಹೇಳಿಕೆ ನೀಡುವ ಚಟವಷ್ಟೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು. ಇಂದು ಪೊನ್ನಂಪೇಟೆ ನೂತನ ತಾಲ್ಲೂಕು ಉದ್ಘಾಟನಾ ಸಮಾರಂಬದಲ್ಲಿ ಬಾಗವಹಿಸಲು ಬಂದಿದ್ದಾಗ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂತೋಷ್ ಆತ್ಮಹತ್ಯೆ ಯತ್ನ ಸಂಪೂರ್ಣ ಅವರ ವೈಯಕ್ತಿಕ ವಿಚಾರವಾಗಿದ್ದು ಪಕ್ಷ ಅಥವಾ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ಡಿ.ಕೆ.ಶಿವಕುಮಾರ್ ಅಡಿಯೊ, ವಿಡಿಯೊ ಇದೆ ಎಂದು ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ರಾಜಕೀಯ ಲೇಪ ಬಳಿಯುತಿದ್ದಾರೆ ಎಂದು ಆರೋಪಿಸಿದರು.

 ಬಿ.ಎಸ್. ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ. ಯಾವುದೇ ರೀತಿಯ ಭಿನ್ನಮತ ಪಕ್ಷದೊಳಗಿಲ್ಲ. ನಾನು ದೆಹಲಿಗೆ ಹೋಗಿದ್ದೆ. ಅಲ್ಲಿಯೂ ನಾಯಕತ್ವ ಬದಲಾವಣೆ ಕುರಿತು ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ. ಶಂಕರ್, ಮುನಿರತ್ನ ಹಾಗೂ ಎಂ.ಟಿ.ನಾಗರಾಜ್ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ‌ ಎಂದು ಹೇಳಿದರು. 

ಸಚಿವ ನಾರಾಯಣಗೌಡ ಅವರು ಮಾತನಾಡಿ, ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ಔಷಧಿ ವ್ಯತಿರಿಕ್ತ ಪರಿಣಾಮ ಬೀರಿದ್ದರಿಂದ ಅಸ್ವಸ್ಥ ಗೊಂಡಿದ್ದರು. ಈಗ ಅವರು ಗುಣಮುಖರಾಗುತ್ತಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು