ಮಂಡ್ಯ: ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥನಾರಾಯಣ ಹೇಳಿದ್ದಾರೆ.
ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ಹಾದು ಹೋಗುತ್ತಿರುವ ರಾಮನಗರ ಜಿಲ್ಲೆಗೆ ಕಾವೇರಿ ನದಿಯಿಂದ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಯಾರ್ಡ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರದ ಸಹಕಾರದೊಂದಿಗೆ ನಾರ್ಕೋಟಿಕ್ಸ್ ಇಲಾಖೆ, ಪೆÇಲೀಸ್ ಇಲಾಖೆಯ ಮೂಲಕ ಸಮಾಜದ ಸ್ವಸ್ಥ ಕಾಪಾಡಲು ಗಮನ ನೀಡಿ ಯಾರೆಲ್ಲ ಈ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ, ಅವರುಗಳು ದೊಡ್ಡವರಾಗಿದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲ, ಈಗಾಗಲೇ ಈ ಬಗ್ಗೆ ಗೃಹ ಸಚಿವರು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದರು.
ಕುಡಿಯುವ ನೀರಿಗೆ ಮೊದಲು ಆಧ್ಯತೆ ನೀಡಬೇಕಾಗಿದೆ ಆ ನಿಟ್ಟಿನಲ್ಲಿ ಪೈಪ್ ಲೈನ್ ಹಾದು ಹೋಗಲಿರುವ ಎಲ್ಲಾ ಹಳ್ಳಿಗಳಿಗೆ ಕಾವೇರಿ ನದಿಯ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು, ಅದಕ್ಕಾಗಿ ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಪರಿಶೀಲನೆ ಮಾಡಿದ್ದೇನೆ, ಆದಷ್ಟು ಬೇಗ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮವಹಿಸುವುದಾಗಿ ಹೇಳಿದರು.
ಇದೇ ವೇಳೆ ತಾಲೂಕಿನ ನೆಟ್ಕಲ್ ಗ್ರಾಮದ ಬಳಿ ಇರುವ ರಾಮನಗರಕ್ಕೆ ಹೋಗುವ ಸುರಂಗ ಮಾರ್ಗವನ್ನು ವೀಕ್ಷಿಸಿದರು.