ಹಾಸನ: ಕೇವಲ ಹುಡುಗಿಗೆ ಬೈಕ್ ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಯುವತಿಯ ಮನೆಯವರು ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗ ಥಳಿಸಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹಾಸನದ ಅರಕಲಗೂಡು ತಾಲೂಕಿನ ಅಬ್ಬೂರಿನಲ್ಲಿ ಈ ಘಟನೆ ನಡೆದಿದ್ದು, ಶರಣ್(18) ಮೃತ ಯುವಕ. ಈ ವೇಳೆ ಹಲ್ಲೆ ಬಿಡಿಸಲು ಹೋದ ಹುಡುಗನ ತಂದೆಯ ಮೇಲೂ ಯುವತಿಯ ಮನೆಯವರು ಹಲ್ಲೆ ಮಾಡಿದ್ದಾರೆ. ಹೀಗಾಗಿ ಘಟನೆಯಿಂದ ತೀವ್ರವಾಗಿ ನೊಂದ ಯುವಕ ಶರಣ್ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಪ್ರಕರಣ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಗೈದ ಯುವತಿಯ ಮನೆಯ ನಾಲ್ವರು ಸದಸ್ಯರು ಪರಾರಿಯಾಗಿದ್ದಾರೆ.