News Karnataka Kannada
Saturday, May 11 2024
ಕರ್ನಾಟಕ

ಡ್ರಾಪ್ ಕೊಟ್ಟಿದ್ದಕ್ಕೆ ಯುವತಿಯ ಮನೆಯವರಿಂದ ಥಳಿತ: ನೊಂದ ಯುವಕ ಆತ್ಮಹತ್ಯೆ

Photo Credit :

ಡ್ರಾಪ್ ಕೊಟ್ಟಿದ್ದಕ್ಕೆ ಯುವತಿಯ ಮನೆಯವರಿಂದ ಥಳಿತ: ನೊಂದ ಯುವಕ ಆತ್ಮಹತ್ಯೆ

ಹಾಸನ: ಕೇವಲ ಹುಡುಗಿಗೆ ಬೈಕ್ ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಯುವತಿಯ ಮನೆಯವರು ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗ ಥಳಿಸಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಹಾಸನದ ಅರಕಲಗೂಡು ತಾಲೂಕಿನ ಅಬ್ಬೂರಿನಲ್ಲಿ ಈ ಘಟನೆ ನಡೆದಿದ್ದು, ಶರಣ್(18) ಮೃತ ಯುವಕ. ಈ ವೇಳೆ ಹಲ್ಲೆ ಬಿಡಿಸಲು ಹೋದ ಹುಡುಗನ ತಂದೆಯ ಮೇಲೂ ಯುವತಿಯ ಮನೆಯವರು ಹಲ್ಲೆ ಮಾಡಿದ್ದಾರೆ. ಹೀಗಾಗಿ ಘಟನೆಯಿಂದ ತೀವ್ರವಾಗಿ ನೊಂದ ಯುವಕ ಶರಣ್ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಪ್ರಕರಣ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಗೈದ ಯುವತಿಯ ಮನೆಯ ನಾಲ್ವರು ಸದಸ್ಯರು ಪರಾರಿಯಾಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು