News Karnataka Kannada
Monday, May 20 2024
ಕರ್ನಾಟಕ

ತಮ್ಮನ ಮನೆಯನ್ನೇ ದೋಚಿದ ಅಣ್ಣ ಈಗ ಪೊಲೀಸರ ಅತಿಥಿ

Photo Credit :

ತಮ್ಮನ ಮನೆಯನ್ನೇ ದೋಚಿದ ಅಣ್ಣ ಈಗ ಪೊಲೀಸರ ಅತಿಥಿ

ಮಡಿಕೇರಿ: ಒಡ ಹುಟ್ಟಿದ ಅಣ್ಣನೇ ತಮ್ಮನ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳವು ಮಾಡಿ ಸಿಕ್ಕಿ ಬಿದ್ದ ಘಟನೆ ನಗರದಲ್ಲಿ ನಡೆದಿದ್ದು, ಪ್ರಕರಣ ನಡೆದ ಕೇವಲ 6 ಗಂಟೆಯಲ್ಲೇ ಕಳವು ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಕೆ.ಆರ್.ಪೇಟೆಯ ಸಾರಂಗಿ ಗ್ರಾಮದ ಸಂತೆ ಬಾಚಳ್ಳಿ ಹೋಬಳಿ ನಿವಾಸಿ ಎನ್. ಸಂತೋಷ್ ಕುಮಾರ್ ಅಲಿಯಾಸ್ ಸಂತು(36) ಎಂಬತನೇ ಬಂಧಿತ ಆರೋಪಿಯಾಗಿದ್ದಾನೆ.

ಪ್ರಕರಣ ಹಿನ್ನಲೆ:

ಜೂ.4ರಂದು ಸಂಜೆ ಲೋಕೋಪಯೋಗಿ ಇಲಾಖಾ ನೌಕರರಾರಗಿರುವ ಅರುಣ್ ಕುಮಾರ್ ಎಂಬವರ ಮನೆಯಲ್ಲಿ 4.50 ಲಕ್ಷ ನಗದು ಮತ್ತು 2.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮಡಿಕೇರಿ ನಗರ ಠಾಣೆಯಲ್ಲಿ ಅರುಣ್ ಕುಮಾರ್ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಅರುಣ್ ಕುಮಾರ್ ಅವರ ಮನೆಯ ಅಕ್ಕಪಕ್ಕದ ಮನೆಯಲ್ಲಿದ್ದ ಸಿ.ಸಿ. ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ವ್ಯಕ್ತಿಯೊಬ್ಬ ಸಂಜೆ 6.30ರಿಂದ 7.30ರ ಸಮಯದಲ್ಲಿ ಅರುಣ್ ಕುಮಾರ್ ಅವರ ಮನೆಯ ಬಳಿ ಸುತ್ತಾಡಿರುವುದು ಕಂಡು ಬಂದಿದೆ. ತಕ್ಷಣವೇ ನಗರದ ಬಸ್ ನಿಲ್ದಾಣ ಮತ್ತು ಟ್ಯಾಕ್ಸಿ ನಿಲ್ದಾಣಗಳನ್ನು ಜಾಲಾಡಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ಸಂದರ್ಭ ಆರೋಪಿ ಹಾಸನದ ಮೂಲಕ ಶಿವಮೊಗ್ಗಕ್ಕೆ ತೆರಳುತ್ತಿರುವ ಮಾಹಿತಿ ದೊರೆತಿದೆ. ಬಳಿಕ ಆರೋಪಿಯ ಬೆನ್ನು ಹತ್ತಿದ ಪೊಲೀಸರು ಹಾಸನದಲ್ಲಿ ಕಳವು ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ ಕಳವು ಆರೋಪಿ ಮತ್ತು ದೂರುದಾರ ಅರುಣ್ ಕುಮಾರ್ ಒಡ ಹುಟ್ಟಿದ ಸಹೋದರರಾಗಿದ್ದು, ಕಳೆದ ಒಂದೂವರೆ ತಿಂಗಳ ಹಿಂದೆ ಆರೋಪಿ ಸಂತೋಷ್ ಕುಮಾರ್ ತಮ್ಮ ಅರುಣ್ ಕುಮಾರ್ ನ ಮನೆಗೆ ಬಂದಿದ್ದ. ಈ ಸಂದರ್ಭ ಸಂತೋಷ್ ಕುಮಾರ್, ಅರುಣ್ ಕುಮಾರ್ ಬಳಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಆದರೆ ಅರುಣ್ ಕುಮಾರ್ ಹಣ ನೀಡದೇ ಬರಿಕೈಯಲ್ಲಿ ಕಳುಹಿಸಿದ್ದ ಎಂದು ತಿಳಿಸಿದರು. ಇದಾದ ಬಳಿಕ ಜೂ.4ರಂದು ಮಡಿಕೇರಿಗೆ ಬಂದ ಸಂತೋಷ್ ಕುಮಾರ್ ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮನೆಯ ಮುಂಭಾಗಿಲಿನ ಬೀಗ ತೆಗೆದು ಒಳ ತೆರಳಿ 4.5 ಲಕ್ಷ ರೂ. ನಗದು ಮತ್ತು ಕಬೋರ್ಡ್‍ನಲ್ಲಿಟ್ಟಿದ್ದ ಆತನ ತಾಯಿಯ 60 ಗ್ರಾಂ ತೂಕದ ಮಾಂಗಲ್ಯ ಸರ, 4 ಗ್ರಾಂ ತೂಕದ ಚಿನ್ನದ ಉಂಗುರ ಕದ್ದು ಪರಾರಿಯಾಗಿದ್ದ ಎಂದು ಹೇಳಿದರು. ಮಡಿಕೇರಿ ನಗರ ಠಾಣೆ ಮತ್ತು ನಗರ ವೃತ್ತ ನಿರೀಕ್ಷಕರ ಕಚೇರಿ ಸಿಬ್ಬಂದಿಗಳ ಸಹಿತ ಹಾಸನ ಪೊಲೀಸರು ಕೂಡ ಆರೋಪಿಯನ್ನು ಬಂಧಿಸುವಲ್ಲಿ ಸಹಕರಿಸಿದ್ದಾರೆ. ಪ್ರಕರಣ ನಡೆದು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಮಾಲು ಸಹಿತ ಬಂಧಿಸಿರುವ ಪೊಲೀಸರ ಕಾರ್ಯಕ್ಕೆ ಎಸ್.ಪಿ. ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ಡಿವೈಎಸ್‍ಪಿ ದಿನೇಶ್ ಕುಮಾರ್ ಮತ್ತು ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ನಗರ ಠಾಣಾಧಿಕಾರಿ ಕು. ಅಂತಿಮ, ಸಿಪಿಐ ಕಚೇರಿ ಸಿಬ್ಬಂದಿಗಳಾದ ಕಿರಣ್, ಚರ್ಮಣ್ಣ, ಅಪರಾಧ ವಿಭಾಗದ ಶ್ರೀನಿವಾಸ, ಪ್ರವೀಣ್, ನಾಗರಾಜ್, ಅರುಣ್ ಕುಮಾರ್, ಪ್ರಸನ್ನ ಕುಮಾರ್, ಮಹದೇವಸ್ವಾಮಿ, ಸುನೀಲ್, ಶಶಿಕುಮಾರ್, ಭವಾನಿ ಅವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು